ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ. ನಾವೆಲ್ಲ ಪರ್ಸಿನಲ್ಲಿ ದುಡ್ಡು ಇಟ್ಟುಕೊಳ್ಳುತ್ತೇವಲ್ಲ, ಬಿಟ್ಕಾಯಿನ್ಗಳನ್ನು ಕಂಪ್ಯೂಟರಿನಲ್ಲಿರುವ ಡಿಜಿಟಲ್ ವ್ಯಾಲೆಟ್ಗಳಲ್ಲಷ್ಟೆ ಇಟ್ಟುಕೊಳ್ಳುವುದು ಸಾಧ್ಯ
ಬಳಕೆದಾರರು ಹೇಳುವ ಪ್ರಕಾರ ಇದು ಒಂದು ಡಿಜಿಟಲ್ ಕರೆನ್ಸಿ. ಜಗತ್ತಿನ ಯಾವುದೇ ಭಾಗದಿಂದ ಕೆಲವೇ ನಿಮಿಷಗಳಲ್ಲಿ ಹಣ ಕಳಿಸಲು ಅಥವಾ ಪಡೆಯಲು ಬಳಸಬಹುದು. ಕೆಲವು ಕಡೆಗಳಲ್ಲಿ ಉತ್ಪನ್ನ ಮತ್ತು ಸೇವೆಗಳನ್ನು ಪಡೆಯಲು ಕೂಡ ಉಪಯೋಗಿಸಬಹುದು. ಷೇರು ಮತ್ತು ಚಿನ್ನದಲ್ಲಿ ಹೂಡಿಕೆ ಬೇಕಾದರೂ ಮಾಡಬಹುದು. ಆದರೆ ಇಲ್ಲಿ ವರ್ಗಾವಣೆಗಳೆಲ್ಲವೂ ಇಂಟರ್ನೆಟ್ ಮೂಲಕ ನಡೆಯುತ್ತದೆ. ಬಿಟ್ಕಾಯಿನ್ನ ಮೌಲ್ಯವನ್ನು ಕೊನೆಯಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಗೆ ಪರಿವರ್ತಿಸಿಕೊಳ್ಳಬಹುದು.
ಬಿಟ್ಕಾಯಿನ್ ವ್ಯವಸ್ಥೆ ಪರಿಚಯವಾದದ್ದು 2009ರಲ್ಲಿ. ಸಟೋಶಿ ನಕಾಮೋಟೋ ಎಂಬ ಹೆಸರಿನ ಅಜ್ಞಾತ ವ್ಯಕ್ತಿಯನ್ನು ಬಿಟ್ಕಾಯಿನ್ ಸೃಷ್ಟಿಕರ್ತ ಎಂದು ಗುರುತಿಸಲಾಗುತ್ತದೆ. ಆದರೆ, ಅದು ಯಾರಾದರೂ ನಿಜವಾದ ಹೆಸರೋ ಅಲ್ಲವೋ ಎನ್ನುವುದರ ಬಗ್ಗೆ ಸಾಕಷ್ಟು ಸಂದೇಹಗಳಿವೆ. ಅಷ್ಟೇ ಅಲ್ಲ, ಬಿಟ್ಕಾಯಿನ್ ಸೃಷ್ಟಿಯ ಹಿಂದೆ ದೊಡ್ಡದೊಂದು ತಂಡವೇ ಇರುವ ಸಂಶಯ ಕೂಡ ಇದೆ.
ಪ್ರತಿ ದೇಶದಲ್ಲೂ ಚಲಾವಣೆಯಲ್ಲಿರುವ ಕರೆನ್ಸಿಗಳಂತೆ ಬಿಟ್ಕಾಯಿನ್ ಅನ್ನು ಯಾವುದೇ ಬ್ಯಾಂಕ್ ಅಥವಾ ಸರಕಾರ ನಿಯಂತ್ರಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಬಿಟ್ಕಾಯಿನ್ ಕರೆನ್ಸಿಯನ್ನು ಗೊತ್ತುಗುರಿಯಿಲ್ಲದಂತೆ ಚಲಾವಣೆಗೆ ತರಲಾಗುತ್ತದೆ ಎಂದೇನೂ ಇಲ್ಲ, ಪೂರೈಕೆ ಹೆಚ್ಚಾಗಿ ಹಣದುಬ್ಬರ ಉಂಟಾಗದಂತೆ ತಡೆಯಲು ಪ್ರತಿ ಬಾರಿಯೂ ನಿರ್ದಿಷ್ಟ ಪ್ರಮಾಣದ ಬಿಟ್ಕಾಯಿನ್ಗಳಷ್ಟೆ ಹೊಸದಾಗಿ ಚಲಾವಣೆಗೆ ಬರುತ್ತವೆ.
ಬಿಟ್ಕಾಯಿನ್ ಸಂಪಾದಿಸಬೇಕು ಎನ್ನುವವರು ತಮ್ಮ ಕಂಪ್ಯೂಟರುಗಳಲ್ಲಿ ಒಂದು ವಿಶೇಷ ತಂತ್ರಾಂಶವನ್ನು ಅನುಸ್ಥಾಪಿಸಿಕೊಳ್ಳಬೇಕು. ಅನೇಕ ಜನರು ಹೀಗೆ ಸೇರಿದಾಗ ದೊರಕುವ ಸಂಸ್ಕರಣಾ ಸಾಮರ್ಥಯವನ್ನು ಬಳಸಿಕೊಂಡು ವಿಶ್ವದೆಲ್ಲೆಡೆ ಬಿಟ್ಕಾಯಿನ್ ಬಳಕೆದಾರರು ನಡೆಸುವ ವಹಿವಾಟನ್ನೆಲ್ಲ ಸಂಸ್ಕರಿಸುವ ಕೆಲಸ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಹಲವಾರು ಸಂಕೀರ್ಣ ಲೆಕ್ಕಾಚಾರಗಳನ್ನು ಕೈಗೊಳ್ಳಬೇಕಾದ್ದರಿಂದ ಅದು ಕ್ಲಿಷ್ಟವಷ್ಟೇ ಅಲ್ಲ, ನಿಧಾನವೂ ಹೌದು. ಈ ಪ್ರಕ್ರಿಯೆ ಮುಂದುವರಿಯುತ್ತ ಹೋದಂತೆ ಅದರಲ್ಲಿ ನೆರವಾದವರಿಗೆ ಬಿಟ್ಕಾಯಿನ್ ರೂಪದ ಹಣ ದೊರಕುತ್ತ ಹೋಗುತ್ತದೆ, ಆ ಮೂಲಕ ಚಲಾವಣೆಯಲ್ಲಿರುವ ಬಿಟ್ಕಾಯಿನ್ಗಳ ಪ್ರಮಾಣವೂ ಹೆಚ್ಚುತ್ತದೆ. ಬಳ್ಳಾರಿಯಲ್ಲಿ ಮಣ್ಣು ಬಗೆಯುವ ಬದಲು ಕಂಪ್ಯೂಟರಿನಲ್ಲಿ ಬಿಟ್ಕಾಯಿನ್ ಕೂಡಿಸುವ ಈ ಪ್ರಕ್ರಿಯೆಗೂ ಮೈನಿಂಗ್ ಎಂದೇ ಹೆಸರು. ಈಚೆಗೆ ಬಿಟ್ಕಾಯಿನ್ ಗಣಿಗಾರಿಕೆಯ ಈ ಕೆಲಸ ಸಾಧಾರಣ ಕಂಪ್ಯೂಟರುಗಳ ಸಾಮರ್ಥಯವನ್ನು ಮೀರಿ ಬೆಳೆದುಬಿಟ್ಟಿರುವುದರಿಂದ ಅದಕ್ಕೆಂದೇ ಮೈನರ್ಗಳೆಂಬ ವಿಶೇಷ ಯಂತ್ರಾಂಶಗಳೂ ತಯಾರಾಗುತ್ತಿವೆ.
ಇತ್ತೀಚೆಗೆ ಒಂದು ಬಿಟ್ಕಾಯಿನ್ನ ಬೆಲೆ 10,000 ಡಾಲರ್ನಷ್ಟು ಏರಿರುವುದು ವಿಶ್ವದೆಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಷೇರು ಮಾರುಕಟ್ಟೆ ಜೂಜು ಎಂದು ಕರೆಯುತ್ತಿದ್ದಾರೆ. ಕೇವಲ 4 ತಿಂಗಳಿನಲ್ಲಿ 6 ಲಕ್ಷ ಬೆಲೆ ಏರಿಕೆಯಾಗಿರುವುದು ಇದಕ್ಕೆ ಉದಾಹರಣೆಯಾಗಿದ್ದು, ಇಷ್ಟೆಲ್ಲ ದುಡ್ಡು ಯಾಕೆ ಸುರಿಯುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.!!
ಇದರ ಅನುಕೂಲಗಳು ಮತ್ತು ಅನಾನುಕುಲಗಳ ಬಗ್ಗೆ ತಿಳಿಯಿರಿ…
ಹಣದ ತ್ವರಿತ ವರ್ಗಾವಣೆಗೆ ಇಲ್ಲಿ ಸಂಸ್ಕರಣೆ ಶುಲ್ಕ ಇರುವುದಿಲ್ಲ. ಇದ್ದರೂ ಅತ್ಯಲ್ಪ. ವಿಶ್ವಾದ್ಯಂತ ಚಲಾವಣೆ ಮಾಡಬಹುದು. ಆದರೆ ಚೀನಾ ಇತ್ತೀಚೆಗೆ ತನ್ನ ಬ್ಯಾಂಕಿಂಗ್ ವಲಯದಲ್ಲಿ ಬಳಕೆಯನ್ನು ನಿಷೇಧಿಸಿದೆ. ಉತ್ಪನ್ನ, ಸೇವೆಗಳ ಖರೀದಿಗೆ ಬಳಸಬಹುದು. ಒಂದು ವೇಳೆ ನಷ್ಟವಾದರೆ ತಡೆದುಕೊಳ್ಳಬಲ್ಲೆ ಎಂಬ ನಂಬಿಕೆ ಇದ್ದರೆ ಹೂಡಿಕೆಯನ್ನೂ ಮಾಡಬಹುದು. ವರ್ಡ್ಪ್ರೆಸ್, ರೆಡಿಟ್, ನೇಮ್ಚೀಪ್ ಮತ್ತು ಫ್ಲಾಟ್ಟರ್ ಮುಂತಾದ ಆನ್ಲೈನ್ ತಾಣಗಳು ಬಿಟ್ಕಾಯಿನ್ಗಳನ್ನು ನೇರವಾಗಿ ಸ್ವೀಕರಿಸುತ್ತವೆ.
ಬಿಟ್ಕಾಯಿನ್ಗಳು ಅಪರಾಧಿಗಳಿಗೆ ಆರ್ಥಿಕ ಅಪರಾಧಗಳನ್ನು ಎಸಗಲು ಹಾದಿ ಮಾಡಿಕೊಟ್ಟಿದೆ. ಮಾದಕ ದ್ರವ್ಯಗಳ ಕಳ್ಳಸಾಗಣೆದಾರರಿಗೆ ಹಣ ವರ್ಗಾವಣೆಗೆ ಬಿಟ್ಕಾಯಿನ್ಗಳು ಬಳಕೆಯಾಗುತ್ತದೆ. ಯಾಕೆಂದರೆ ಇಲ್ಲಿ ಹಣದ ವರ್ಗಾವಣೆ ಯಾರು ಯಾರಿಗೆ ಮಾಡಿದರು ಎಂಬ ವಿವರವನ್ನು ಪತ್ತೆ ಹಚ್ಚಲಾಗುವುದಿಲ್ಲ. ಇದರ ಬೆಲೆ ಕೂಡ ಕ್ಷಣ ಕ್ಷಣಕ್ಕೆ ತೀವ್ರ ಏರಿಳಿತವಾಗುತ್ತಿರುವುದರಿಂದ ಹೂಡಿಕೆದಾರರಿಗೆ ಯಾವಾಗ ಬೇಕಾದರೂ ಭಾರಿ ನಷ್ಟವಾಗಬಹುದು. ಅಲ್ಲದೆ ಬಳಕೆದಾರರು ಹೆಚ್ಚಿದಂತೆ ಲಭ್ಯತೆ ಕಡಿಮೆಯಾಗುತ್ತದೆ.
ಈಗ ಬೇರೊಬ್ಬರ ಬಿಟ್ಕಾಯಿನ್ಗಳನ್ನು ಕದ್ದು ಬಳಸುವ ವಂಚಕರೂ ಹುಟ್ಟಿಕೊಂಡಿದ್ದಾರೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಬಳಕೆದಾರರ ಸಾವಿರಾರು ಬಿಟ್ಕಾಯಿನ್ಗಳು ಕಳ್ಳತನವಾದ ಅನೇಕ ಘಟನೆಗಳು ವರದಿಯಾಗಿವೆ. ಅಂತರಜಾಲದಲ್ಲಿರುವ ಬಿಟ್ಕಾಯಿನ್ ವಿನಿಮಯ ಕೇಂದ್ರಗಳಿಗೂ ಹಲವುಬಾರಿ ಕನ್ನಹಾಕಿದ ಕಳ್ಳರು ಅಲ್ಲೂ ತಮ್ಮ ಕೈಚಳಕ ತೋರಿಸಿದ್ದರು. ಅಂತಹ ಒಂದು ಸಂದರ್ಭದಲ್ಲಿ ಉಂಟಾದ ಗೊಂದಲ ಎಷ್ಟರಮಟ್ಟಿಗಿತ್ತು ಎಂದರೆ ಬಿಟ್ಕಾಯಿನ್ಗಳ ವಿನಿಮಯ ದರ ಒಮ್ಮೆಲೇ ಹತ್ತಾರು ಪಟ್ಟು ಕುಸಿದು ಅವುಗಳ ಅಸ್ತಿತ್ವಕ್ಕೇ ಸಂಚಕಾರ ಬರುವಂತಹ ಪರಿಸ್ಥಿತಿ ಉಂಟಾಗಿತ್ತು.
ಈ ಡಿಜಿಟಲ್ ಕರೆನ್ಸಿಗೆ ದೇಶದಲ್ಲಿ ಕಾನೂನಿನ ಮಾನ್ಯತೆ ಇಲ್ಲ. ಇವುಗಳ ಖರೀದಿ ಮತ್ತು ವಹಿವಾಟಿನ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸದ್ಯ ಬಿಟ್ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಕೂಡ ಇದೆ. ಹಣಕಾಸು ಸಂಸ್ಥೆಗಳು ಬಿಟ್ಕಾಯಿನ್ ವಹಿವಾಟಿನಲ್ಲಿ ತೊಡಗದಂತೆ ಕೆಲದಿನಗಳ ಹಿಂದೆ ಚೀನಾದಲ್ಲಿ ಘೋಷಣೆಯಾದ ನಿರ್ಬಂಧ ಇದಕ್ಕೊಂದು ಉದಾಹರಣೆ.
ಸದ್ಯ ಬಿಟ್ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಇದೆ.ಬಿಟ್ಕಾಯಿನ್ ಮೌಲ್ಯದಲ್ಲಿ ಬಹಳ ಕ್ಷಿಪ್ರವಾಗಿ ಸಂಭವಿಸುವ ಏರಿಳಿತಗಳಿಂದ ಅವುಗಳ ಸ್ಥಿರತೆಯ ಬಗೆಗೂ ಅನುಮಾನ ಮೂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.