ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.
ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.
ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.
ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.
ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.
ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್ನನ್ನು ಸದೆಬಡಿಯಿತು.
ಇದಿ ಅಮಿನ್:-

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.
ಮೊಹಮ್ಮದ್ ಗಡ್ಡಾಫಿ:-![]()
ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.
ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.
ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.
ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…