ದೇಶ-ವಿದೇಶ

ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

212

ಸರಕು ಸೇವಾ ತೆರಿಗೆ (GST)  ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

 

 

 

 

ಜಿಎಸ್ಟಿ (GST)ಯಿಂದ ಏನೆಲ್ಲಾ ದರ ಕಡಿಮೆಯಾಗುತ್ತೆ? 

ಜಿಎಸ್‌ಟಿ ಮಂಡಳಿ ಒಟ್ಟು 66 ವಸ್ತುಗಳ ಮೇಲಿನ ತೆರಿಗೆಯನ್ನು ಬದಲಿಸಿದೆ. ಉಪ್ಪಿನಕಾಯಿ, ಸಾಸಿವೆ ಸಾಸ್‌, ಕಜ್ಜಾಯಕ್ಕೆ ಬೇಕಾಗುವ ಸಾಮಗ್ರಿಗಳು ಸೇರಿ ಅಡುಗೆ ಮನೆಗೆ ಅಗತ್ಯವಾದ ಬಹುತೇಕ ವಸ್ತುಗಳು ಹಾಗೂ ಸಿನೆಮಾ ಟಿಕೆಟ್‌ಗಳ ದರ ಕಡಿಮೆಯಾಗಲಿವೆ.

 

ಜಿಎಸ್‌ಟಿ ಮಂಡಳಿ ನಿಗದಿ ಪಡಿಸಿರುವಂತೆ ಸಿನೆಮಾ ಟಿಕೆಟ್‌ ಹಾಗೂ ಇತರೆ ತೆರಿಗೆಗಳು :-

  • 100 ರೂ. ಆಗಿದ್ದಲ್ಲಿ ಶೇ.18 ತೆರಿಗೆ,
  • 100ಕ್ಕಿಂತ ಜಾಸ್ತಿ ಬೆಲೆಯ ಟಿಕೆಟ್‌ಗಳಿಗೆ ಶೇ. 28ರಷ್ಟು ತೆರಿಗೆ.
  •  ಉಪ್ಪಿನಕಾಯಿ, ಸಾಸ್‌ ಹಾಗೂ ಸಿಹಿ ಪದಾರ್ಥಗಳ ಮೇಲಿನ ಈ ಮೊದಲ ಶೇ. 18 ತೆರಿಗೆಯನ್ನು ಶೇ. 12ಕ್ಕೆ ಇಳಿಸಿದೆ.
  • ಗೋಡಂಬಿ ಮೇಲಿನ ಶೇ. 12ರಷ್ಟು ತೆರಿಗೆಯನ್ನು ಶೇ. 5ಕ್ಕೆ ನಿಗದಿಪಡಿಸಲಾಗಿದೆ.

 

ಜಿಎಸ್ಟಿ (GST) ನಿಗದಿಪಡಿಸಿರುವ ಇತರ ತೆರಿಗೆಗಳು :-

  •  ವ್ಯಾಪಾರಿಗಳು, ತಯಾರಕರು, ಹೊಟೇಲ್‌ ಮಾಲಕರ ವಹಿವಾಟು 75 ಲಕ್ಷ ರೂ. ಮೀರದಿದ್ದಲ್ಲಿ ಅವರಿಗೆ ಕ್ರಮವಾಗಿ ಶೇ. 1, 2 ಹಾಗೂ 5 ತೆರಿಗೆ ನಿಗದಿಪಡಿಸಿದೆ.
  • ಕೃಷಿ ಸಾಮಗ್ರಿಗಳ ತೆರಿಗೆಯನ್ನು ಶೇ. 18ಕ್ಕೆ ಇಳಿಸಲಾಗಿದೆ.
  • ಮಕ್ಕಳ ಡ್ರಾಯಿಂಗ್‌ ಪುಸ್ತಕಗಳ ಮೇಲಿದ್ದ  ಶೇ. 12ರಷ್ಟಿದ್ದ  ತೆರಿಗೆಯನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ.
  • ಸ್ಕೂಲ್‌ ಬ್ಯಾಗ್‌ಗಳ ಮೇಲಿನ ತೆರಿಗೆಯನ್ನು ಶೇ.18ಕ್ಕೆ ನಿಗದಿಗೊಳಿಸಲಾಗಿದೆ.

 

ಜಿಎಸ್ಟಿ (GST)ಯಿಂದ  ಕಂಪ್ಯೂಟರ್‌ ಬಳಕೆದಾರರಿಗೂ ಸಿಹಿ ಸುದ್ದಿ :-

  • ಕಂಪ್ಯೂಟರ್‌ ಬಳಕೆದಾರರಿಗೂ ಸಿಹಿ ಸುದ್ದಿ ಇದ್ದು, ಪ್ರಿಂಟರ್‌ ಸಾಮಗ್ರಿಗಳು ಮೇಲೆ ಶೇ.12 ತೆರಿಗೆ ನಿಗದಿಗೊಳಿಸಲಾಗಿದೆ.
  • ಶಾಲಾ ಸಾಮಗ್ರಿಗಳಿಗೆ ಶೇ.12 ತೆರಿಗೆ ನಿಗದಿಗೊಳಿಸಲಾಗಿದೆ.

 

ಜಾಬ್‌ ವರ್ಕ್‌ ದರಕ್ಕೆ ಶ್ಲಾಘನೆ :-  

ಜವಳಿ, ಚರ್ಮ  ಮತ್ತು ಚಿನ್ನಾಭರಣ  ವಲಯಗಳಲ್ಲಿ ದುಡಿಯುವ ಕೆಲಸಗಾರರು ಮನೆಗೆ ತೆಗೆದುಕೊಂಡು ಹೋಗುವ ಕೆಲಸಗಳ ಮೇಲಿನ ತೆರಿಗೆಯನ್ನು ಶೇ 18ರಿಂದ ಶೇ 5ಕ್ಕೆ ಇಳಿಸುವ ನಿರ್ಧಾರವನ್ನು ಈ ಉದ್ಯಮ ವಲಯ ಸ್ವಾಗತಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…