ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….
*ದುಬಾರಿಯಾಗಲಿರುವ ಸೇವೆಗಳು:-
ನೋಟ್ ಬ್ಯಾನ್ ಆದ ನಂತರ ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್ಗಳು ಈಗ ಜಿಎಸ್ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.
ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ 4 ಬಾರಿ ಎಟಿಎಂ ವಿತ್ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್ಡ್ರಾಗೂ ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.
ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ
ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ ಹೆಚ್ಚಳವಾಗಲಿದೆ.
ರೈತರನ್ನು ಬಿಡದ ಜಿಎಸ್ಟಿ:-
ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.
ಆಭರಣ ಪ್ರಿಯರಿಗೆ ತೆರಿಗೆ :-
ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ ಜಿಎಸ್ಟಿ ತೆರಿಗೆ ಬೀಳಲಿದೆ.
ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-
ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್ಸ್ಕ್ರೀನ್ ಮೇಲೆ ಜಿಎಸ್ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್ಕಿನ್ಸ್ ಮೇಲೆ ಕೂಡ ಜಿಎಸ್ಟಿ ತೆರಿಗೆ ಹೆಚ್ಚಲಿದೆ.
ಜಿಎಸ್ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…
ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.
ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..
ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ ಜಿಎಸ್ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.
ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ

ಜಿಎಸ್ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.
ಆನ್ಲೈನ್ ಬುಕ್ಕಿಂಗ್ ಮತ್ತು ವ್ಯವಹಾರದ ಮೇಲೆ ಜಿಎಸ್ಟಿ ಬರೆ
ಜುಲೈ 1 ರಾ ನಂತರ ಆನ್ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.
ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-
ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.
ಕನಸಿನ ಮನೆ ನಿರ್ಮಾಣ ಕಷ್ಟ :-
ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ಇಂದಿನ ಸ್ಮಾರ್ಟ್ಫೋನ್ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್ಫೋನ್ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್ಫೋನ್ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.