News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ಹಣ ಕಾಸು

ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

1845

ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ  ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….

*ದುಬಾರಿಯಾಗಲಿರುವ ಸೇವೆಗಳು:-

ನೋಟ್ ಬ್ಯಾನ್ ಆದ ನಂತರ  ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ  ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್‍ಗಳು ಈಗ ಜಿಎಸ್‍ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.

ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?

 

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ  4 ಬಾರಿ ಎಟಿಎಂ ವಿತ್‍ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್‍ಡ್ರಾಗೂ  ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್‍ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.

ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ

ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ  ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ  ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ  ಹೆಚ್ಚಳವಾಗಲಿದೆ.

 ರೈತರನ್ನು ಬಿಡದ ಜಿಎಸ್ಟಿ:-

ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್‍ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.

ಆಭರಣ ಪ್ರಿಯರಿಗೆ ತೆರಿಗೆ :-

ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ  ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ  ಜಿಎಸ್‍ಟಿ ತೆರಿಗೆ ಬೀಳಲಿದೆ.

ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-

ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್‍ಸ್ಕ್ರೀನ್ ಮೇಲೆ  ಜಿಎಸ್‍ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲೆ ಕೂಡ ಜಿಎಸ್‍ಟಿ ತೆರಿಗೆ ಹೆಚ್ಚಲಿದೆ.

ಜಿಎಸ್‍ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…

ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್‍ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.

ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..

ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ  ಜಿಎಸ್‍ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.

ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ


ಜಿಎಸ್‍ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ  ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.

ಆನ್‍ಲೈನ್ ಬುಕ್ಕಿಂಗ್ ಮತ್ತು  ವ್ಯವಹಾರದ ಮೇಲೆ ಜಿಎಸ್ಟಿ ಬರೆ

ಜುಲೈ 1 ರಾ ನಂತರ  ಆನ್‍ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್‍ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.

ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-

ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.

ಕನಸಿನ ಮನೆ ನಿರ್ಮಾಣ ಕಷ್ಟ :-

 

ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?