ಉಪಯುಕ್ತ ಮಾಹಿತಿ

ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

4435

ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

ಯಶಸ್ಸಿನ ಹಾದಿ ಸುಲಭವಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಒಬ್ಬ ಯಶಸ್ವಿ ಮನುಷ್ಯನ ಹಿಂದೆ ಸಾಕಷ್ಟು ಹೋರಾಟವಿರುತ್ತದೆ. ನಮ್ಮ ಪ್ರೀತಿಯ ಮೇಷ್ಟ್ರು ದಿವಂಗತ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರು ಹೇಳುತ್ತಾರೆ: “ಯಶಸ್ಸಿನ ಕಥೆಯನ್ನು ಓದಿದರೆ ಕೇವಲ ನಿಮಗೊಂದು ಸಂದೇಶ ಸಿಗಬಹುದು ಆದರೆ ಸೋಲಿನ ಕಥೆಗಳಿಂದ ಗೆಲುವಿನ ದಾರಿಯಲ್ಲಿ ಸಹಾಯವಾಗುವುದು” ಎಂದು.

 

ಯಶಸ್ಸಿನ ಹಾದಿಯಲ್ಲಿ ಈ ಅಂಶಗಳನ್ನು ಅನುಸರಿಸಿ, ನಡೆಯುವ ದಾರಿಯನು ಸುಗಮಗೊಳಿಸಿ

  • ಮೊಟ್ಟಮೊದಲನೇಯದಾಗಿ ನಿಮ್ಮನ್ನು ನೀವು ಬೇರೆಯವರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿಯೊಬ್ಬನ ಹೋರಾಟ ಬೇರೆಯೇ
  • ನಿಮಗೆ ಕೊಟ್ಟ ಎಲ್ಲಾ ಕೆಲಸಗಳು ತುಂಬಾನೆ ಸುಲಭವಾಗಿರುತ್ತವೆ. ಆದರೆ ಅದನ್ನು ಮಾಡಲು ನೀವು ಸೋಮಾರಿತನ ಮಾಡಿ, ನಾಳೆ ಮಾಡುತ್ತೇನೆ ಎಂದು ಮುಂದೂಡುತ್ತಿದ್ದರೆ ಯಶಸ್ಸು ಕಷ್ಟ.

  • ಯಾರೊಂದಿಗೂ ಪೈಪೋಟಿ ಮಾಡಬೇಡಿ. ಅದರಿಂದ ಅಸಮಾಧಾನ ಅತೃಪ್ತಿಯ ವಿನಃ ಏನೂ ಪ್ರಯೋಜನವಿಲ್ಲ.
  • ಯಶಸ್ಸಿನ ಹಾದಿಯಲ್ಲಿ ಮಾರ್ಗದರ್ಶಕರಿರಲಿ ಆದರೆ ಇನ್ನೊಬ್ಬರ ಮೇಲೆ ಅವಲಂಬಿಸಬೇಡಿ. ನಿಮ್ಮ ದಾರಿಯಲ್ಲಿ ನೀವೇ ನಡೆಯಬೇಕು
  • ಎಲ್ಲದಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವಿರಲಿ. ಅನುಮಾನದಿಂದ ಮಾಡಿದ ಯಾವ ಕೆಲಸವೂ ಯಶಸ್ವಿಯಾಗುವುದಿಲ್ಲ.

  • ಆತ್ಮೀಯರೊಂದಿಗೆ ಸರಿ ತಪ್ಪುಗಳ ವಿಮರ್ಶೆ ಅತ್ಯಗತ್ಯ. ಯಾರಾದರೂ ಒಳ್ಳೆಯ ಸಲಹೆ ಕೊಟ್ಟರೆ ಪರಗಣಿಸದಿದ್ದರೂ ಸರಿ ನಿರಾಕರಿಸಬೇಡಿ.
  • ನೀವು ಯಶಸ್ವಿಯಾಗಲು ಮತ್ತೊಬ್ಬರನ್ನು ತುಳಿಯಬೇಡಿ. ಒಂದೊಮ್ಮೆ ನೀವು ಯಶಸ್ವಿಯಾದರೂ ಆ ಅಪರಾಧಿ ಪ್ರಜ್ಞೆ ಬಾಧಿಸದೇ ಬಿಡದು.
  • ಯಾವುದೇ ಕೆಲಸದ ಕುರಿತಂತೆ ಒಂದು ಒಳ್ಳೆ ಗಟ್ಟಿ ನಿರ್ಧಾರ ತೆಗೆದುಕೊಂಡು ಮುನ್ನೆಡೆಯಿರಿ.
  • ನಿಮಗೆ ಆಫೀಸ್‌‌ನಲ್ಲಿ ಈ ಹಿಂದೆ ಯಾರಾದರು ಏನಾದರು ಮಾಡಿದರೆ ಅದಕ್ಕಾಗಿ ಅವರ ಮೇಲೆ ಇಂದಿಗೂ ಕೋಪ ಮಾಡುತ್ತ ಕೂರುತ್ತೀರಿ. ಇದರಿಂದ ಕೆಲಸ ಮಾಡುವಲ್ಲಿ ನಿಮಗೆ ಸಹಕಾರ ಸಿಗೋದಿಲ್ಲ.ಇಲ್ಲಿ ಓದಿ:-ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದ್ರೂ ನಿಮ್ಮನ್ನು ನಂಬುತ್ತಾರೆ…

  • ಯಾವಾಗಲೂ ಬರೀ ಕೆಲಸದಲ್ಲೇ ತಲ್ಲೀನರಾಗದೆ, ನಿಮ್ಮ ಬೇರೆ ಮನರಂಜನೆ ಕಾರ್ಯಕ್ರಮಗಳಿಗೆ ಸಮಯ ಕೊಡಿ.
  • ನೀವು ಶಾರೀರಿಕ ಮತ್ತು ಮಾನಸಿಕವಾಗಿ ಸಧೃಢರಾಗಿದ್ದರೆ ಮಾತ್ರ ಕೆಲಸದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಆದರೆ ನೀವು ಏನೇನೋ ತಿಂದು ಆರೋಗ್ಯ ಕೆಡಿಸಿದರೆ ಅಥವಾ ಮಾನಸಿಕವಾಗಿ ತುಂಬಾ ಕುಂದಿಹೋಗಿದ್ದರೆ ಕೆಲಸ ಮಾಡಲು ಸಾಧ್ಯವಿಲ್ಲ.

  • ಕೆಲಸದ ಅವಧಿಯಲ್ಲಿ ಹೆಚ್ಚಿನ ಸಮಯ ಸೋಶಿಯಲ್‌ ಮೀಡಿಯಾ ನೋಡುತ್ತ ಕಳೆದರೆ ನಿಮಗೆ ಯಶಸ್ಸು ಸಿಗಲು ಹೇಗೆ ಸಾಧ್ಯ ಹೇಳಿ. ಇದರಿಂದ ಸಮಯ ವೇಸ್ಟ್‌ ಆಗುತ್ತದೆ ಅಷ್ಟೆ.
  • ಕೊನೆಯದಾಗಿ ಏನೆಂದರೆ ನೀವು ಯಶಸ್ಸು ಸಾಧಿಸಬೇಕು ಎಂದಾದರೆ ಜೀವನದಲ್ಲಿ ಏನಾದರು ರಿಸ್ಕ್ ತೆಗೆದುಕೊಳ್ಳಲು ರೆಡಿಯಾಗಿರಬೇಕು. ಇಲ್ಲವಾದರೆ ಸಕ್ಸಸ್‌ ನಿಮ್ಮತ್ತ ಸುಳಿಯೋದೆ ಇಲ್ಲ.

ಈ ಯಶಸ್ಸು ಅನ್ನೋದು ಮರೀಚಿಕೆಯಂತೆ. ನೀವು ಅದರ ಹಿಂದೆ ಓಡಿದಷ್ಟು ಅದು ನಿಮ್ಮಿಂದ ದೂರ ಓಡುತ್ತದೆ. ಅದಕ್ಕೇ ಏನೋ ಕೃಷ್ಣ ಹೇಳಿದ್ದು :- ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತ. ಅಂದರೆ ಫಲದ ಅಪೇಕ್ಷೆ ಇಲ್ಲದೇ ನಿನ್ನ ಕರ್ಮ (ಕರ್ತವ್ಯ) ನೀನು ಮಾಡು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಉಪಯುಕ್ತ ಮಾಹಿತಿ

    ಇಡ್ಲಿ ವಡೆ ಮಸಾಲ ದೋಸೆಯ ಉಗಮಸ್ಥಳ ಯಾವುದು ಗೊತ್ತೇ? ಕೇರಳ,ತಮಿಳುನಾಡು,ಕರ್ನಾಟಕ ಅಥವಾ ಆಂದ್ರಾನ? ನಿಜವಾಗಿಯೂ ದಕ್ಷಿಣ ಭಾರತೀಯರ ಸಾಂಪ್ರದಾಯಿಕ ಅಡುಗೆಯ ಮೂಲ ಯಾವುದು ಗೊತ್ತೇ?

    ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…