News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

4469

ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

ಯಶಸ್ಸಿನ ಹಾದಿ ಸುಲಭವಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಒಬ್ಬ ಯಶಸ್ವಿ ಮನುಷ್ಯನ ಹಿಂದೆ ಸಾಕಷ್ಟು ಹೋರಾಟವಿರುತ್ತದೆ. ನಮ್ಮ ಪ್ರೀತಿಯ ಮೇಷ್ಟ್ರು ದಿವಂಗತ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರು ಹೇಳುತ್ತಾರೆ: “ಯಶಸ್ಸಿನ ಕಥೆಯನ್ನು ಓದಿದರೆ ಕೇವಲ ನಿಮಗೊಂದು ಸಂದೇಶ ಸಿಗಬಹುದು ಆದರೆ ಸೋಲಿನ ಕಥೆಗಳಿಂದ ಗೆಲುವಿನ ದಾರಿಯಲ್ಲಿ ಸಹಾಯವಾಗುವುದು” ಎಂದು.

 

ಯಶಸ್ಸಿನ ಹಾದಿಯಲ್ಲಿ ಈ ಅಂಶಗಳನ್ನು ಅನುಸರಿಸಿ, ನಡೆಯುವ ದಾರಿಯನು ಸುಗಮಗೊಳಿಸಿ

  • ಮೊಟ್ಟಮೊದಲನೇಯದಾಗಿ ನಿಮ್ಮನ್ನು ನೀವು ಬೇರೆಯವರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿಯೊಬ್ಬನ ಹೋರಾಟ ಬೇರೆಯೇ
  • ನಿಮಗೆ ಕೊಟ್ಟ ಎಲ್ಲಾ ಕೆಲಸಗಳು ತುಂಬಾನೆ ಸುಲಭವಾಗಿರುತ್ತವೆ. ಆದರೆ ಅದನ್ನು ಮಾಡಲು ನೀವು ಸೋಮಾರಿತನ ಮಾಡಿ, ನಾಳೆ ಮಾಡುತ್ತೇನೆ ಎಂದು ಮುಂದೂಡುತ್ತಿದ್ದರೆ ಯಶಸ್ಸು ಕಷ್ಟ.

  • ಯಾರೊಂದಿಗೂ ಪೈಪೋಟಿ ಮಾಡಬೇಡಿ. ಅದರಿಂದ ಅಸಮಾಧಾನ ಅತೃಪ್ತಿಯ ವಿನಃ ಏನೂ ಪ್ರಯೋಜನವಿಲ್ಲ.
  • ಯಶಸ್ಸಿನ ಹಾದಿಯಲ್ಲಿ ಮಾರ್ಗದರ್ಶಕರಿರಲಿ ಆದರೆ ಇನ್ನೊಬ್ಬರ ಮೇಲೆ ಅವಲಂಬಿಸಬೇಡಿ. ನಿಮ್ಮ ದಾರಿಯಲ್ಲಿ ನೀವೇ ನಡೆಯಬೇಕು
  • ಎಲ್ಲದಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವಿರಲಿ. ಅನುಮಾನದಿಂದ ಮಾಡಿದ ಯಾವ ಕೆಲಸವೂ ಯಶಸ್ವಿಯಾಗುವುದಿಲ್ಲ.

  • ಆತ್ಮೀಯರೊಂದಿಗೆ ಸರಿ ತಪ್ಪುಗಳ ವಿಮರ್ಶೆ ಅತ್ಯಗತ್ಯ. ಯಾರಾದರೂ ಒಳ್ಳೆಯ ಸಲಹೆ ಕೊಟ್ಟರೆ ಪರಗಣಿಸದಿದ್ದರೂ ಸರಿ ನಿರಾಕರಿಸಬೇಡಿ.
  • ನೀವು ಯಶಸ್ವಿಯಾಗಲು ಮತ್ತೊಬ್ಬರನ್ನು ತುಳಿಯಬೇಡಿ. ಒಂದೊಮ್ಮೆ ನೀವು ಯಶಸ್ವಿಯಾದರೂ ಆ ಅಪರಾಧಿ ಪ್ರಜ್ಞೆ ಬಾಧಿಸದೇ ಬಿಡದು.
  • ಯಾವುದೇ ಕೆಲಸದ ಕುರಿತಂತೆ ಒಂದು ಒಳ್ಳೆ ಗಟ್ಟಿ ನಿರ್ಧಾರ ತೆಗೆದುಕೊಂಡು ಮುನ್ನೆಡೆಯಿರಿ.
  • ನಿಮಗೆ ಆಫೀಸ್‌‌ನಲ್ಲಿ ಈ ಹಿಂದೆ ಯಾರಾದರು ಏನಾದರು ಮಾಡಿದರೆ ಅದಕ್ಕಾಗಿ ಅವರ ಮೇಲೆ ಇಂದಿಗೂ ಕೋಪ ಮಾಡುತ್ತ ಕೂರುತ್ತೀರಿ. ಇದರಿಂದ ಕೆಲಸ ಮಾಡುವಲ್ಲಿ ನಿಮಗೆ ಸಹಕಾರ ಸಿಗೋದಿಲ್ಲ.ಇಲ್ಲಿ ಓದಿ:-ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದ್ರೂ ನಿಮ್ಮನ್ನು ನಂಬುತ್ತಾರೆ…

  • ಯಾವಾಗಲೂ ಬರೀ ಕೆಲಸದಲ್ಲೇ ತಲ್ಲೀನರಾಗದೆ, ನಿಮ್ಮ ಬೇರೆ ಮನರಂಜನೆ ಕಾರ್ಯಕ್ರಮಗಳಿಗೆ ಸಮಯ ಕೊಡಿ.
  • ನೀವು ಶಾರೀರಿಕ ಮತ್ತು ಮಾನಸಿಕವಾಗಿ ಸಧೃಢರಾಗಿದ್ದರೆ ಮಾತ್ರ ಕೆಲಸದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಆದರೆ ನೀವು ಏನೇನೋ ತಿಂದು ಆರೋಗ್ಯ ಕೆಡಿಸಿದರೆ ಅಥವಾ ಮಾನಸಿಕವಾಗಿ ತುಂಬಾ ಕುಂದಿಹೋಗಿದ್ದರೆ ಕೆಲಸ ಮಾಡಲು ಸಾಧ್ಯವಿಲ್ಲ.

  • ಕೆಲಸದ ಅವಧಿಯಲ್ಲಿ ಹೆಚ್ಚಿನ ಸಮಯ ಸೋಶಿಯಲ್‌ ಮೀಡಿಯಾ ನೋಡುತ್ತ ಕಳೆದರೆ ನಿಮಗೆ ಯಶಸ್ಸು ಸಿಗಲು ಹೇಗೆ ಸಾಧ್ಯ ಹೇಳಿ. ಇದರಿಂದ ಸಮಯ ವೇಸ್ಟ್‌ ಆಗುತ್ತದೆ ಅಷ್ಟೆ.
  • ಕೊನೆಯದಾಗಿ ಏನೆಂದರೆ ನೀವು ಯಶಸ್ಸು ಸಾಧಿಸಬೇಕು ಎಂದಾದರೆ ಜೀವನದಲ್ಲಿ ಏನಾದರು ರಿಸ್ಕ್ ತೆಗೆದುಕೊಳ್ಳಲು ರೆಡಿಯಾಗಿರಬೇಕು. ಇಲ್ಲವಾದರೆ ಸಕ್ಸಸ್‌ ನಿಮ್ಮತ್ತ ಸುಳಿಯೋದೆ ಇಲ್ಲ.

ಈ ಯಶಸ್ಸು ಅನ್ನೋದು ಮರೀಚಿಕೆಯಂತೆ. ನೀವು ಅದರ ಹಿಂದೆ ಓಡಿದಷ್ಟು ಅದು ನಿಮ್ಮಿಂದ ದೂರ ಓಡುತ್ತದೆ. ಅದಕ್ಕೇ ಏನೋ ಕೃಷ್ಣ ಹೇಳಿದ್ದು :- ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತ. ಅಂದರೆ ಫಲದ ಅಪೇಕ್ಷೆ ಇಲ್ಲದೇ ನಿನ್ನ ಕರ್ಮ (ಕರ್ತವ್ಯ) ನೀನು ಮಾಡು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…