News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

4464

ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

ಯಶಸ್ಸಿನ ಹಾದಿ ಸುಲಭವಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಒಬ್ಬ ಯಶಸ್ವಿ ಮನುಷ್ಯನ ಹಿಂದೆ ಸಾಕಷ್ಟು ಹೋರಾಟವಿರುತ್ತದೆ. ನಮ್ಮ ಪ್ರೀತಿಯ ಮೇಷ್ಟ್ರು ದಿವಂಗತ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರು ಹೇಳುತ್ತಾರೆ: “ಯಶಸ್ಸಿನ ಕಥೆಯನ್ನು ಓದಿದರೆ ಕೇವಲ ನಿಮಗೊಂದು ಸಂದೇಶ ಸಿಗಬಹುದು ಆದರೆ ಸೋಲಿನ ಕಥೆಗಳಿಂದ ಗೆಲುವಿನ ದಾರಿಯಲ್ಲಿ ಸಹಾಯವಾಗುವುದು” ಎಂದು.

 

ಯಶಸ್ಸಿನ ಹಾದಿಯಲ್ಲಿ ಈ ಅಂಶಗಳನ್ನು ಅನುಸರಿಸಿ, ನಡೆಯುವ ದಾರಿಯನು ಸುಗಮಗೊಳಿಸಿ

  • ಮೊಟ್ಟಮೊದಲನೇಯದಾಗಿ ನಿಮ್ಮನ್ನು ನೀವು ಬೇರೆಯವರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿಯೊಬ್ಬನ ಹೋರಾಟ ಬೇರೆಯೇ
  • ನಿಮಗೆ ಕೊಟ್ಟ ಎಲ್ಲಾ ಕೆಲಸಗಳು ತುಂಬಾನೆ ಸುಲಭವಾಗಿರುತ್ತವೆ. ಆದರೆ ಅದನ್ನು ಮಾಡಲು ನೀವು ಸೋಮಾರಿತನ ಮಾಡಿ, ನಾಳೆ ಮಾಡುತ್ತೇನೆ ಎಂದು ಮುಂದೂಡುತ್ತಿದ್ದರೆ ಯಶಸ್ಸು ಕಷ್ಟ.

  • ಯಾರೊಂದಿಗೂ ಪೈಪೋಟಿ ಮಾಡಬೇಡಿ. ಅದರಿಂದ ಅಸಮಾಧಾನ ಅತೃಪ್ತಿಯ ವಿನಃ ಏನೂ ಪ್ರಯೋಜನವಿಲ್ಲ.
  • ಯಶಸ್ಸಿನ ಹಾದಿಯಲ್ಲಿ ಮಾರ್ಗದರ್ಶಕರಿರಲಿ ಆದರೆ ಇನ್ನೊಬ್ಬರ ಮೇಲೆ ಅವಲಂಬಿಸಬೇಡಿ. ನಿಮ್ಮ ದಾರಿಯಲ್ಲಿ ನೀವೇ ನಡೆಯಬೇಕು
  • ಎಲ್ಲದಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವಿರಲಿ. ಅನುಮಾನದಿಂದ ಮಾಡಿದ ಯಾವ ಕೆಲಸವೂ ಯಶಸ್ವಿಯಾಗುವುದಿಲ್ಲ.

  • ಆತ್ಮೀಯರೊಂದಿಗೆ ಸರಿ ತಪ್ಪುಗಳ ವಿಮರ್ಶೆ ಅತ್ಯಗತ್ಯ. ಯಾರಾದರೂ ಒಳ್ಳೆಯ ಸಲಹೆ ಕೊಟ್ಟರೆ ಪರಗಣಿಸದಿದ್ದರೂ ಸರಿ ನಿರಾಕರಿಸಬೇಡಿ.
  • ನೀವು ಯಶಸ್ವಿಯಾಗಲು ಮತ್ತೊಬ್ಬರನ್ನು ತುಳಿಯಬೇಡಿ. ಒಂದೊಮ್ಮೆ ನೀವು ಯಶಸ್ವಿಯಾದರೂ ಆ ಅಪರಾಧಿ ಪ್ರಜ್ಞೆ ಬಾಧಿಸದೇ ಬಿಡದು.
  • ಯಾವುದೇ ಕೆಲಸದ ಕುರಿತಂತೆ ಒಂದು ಒಳ್ಳೆ ಗಟ್ಟಿ ನಿರ್ಧಾರ ತೆಗೆದುಕೊಂಡು ಮುನ್ನೆಡೆಯಿರಿ.
  • ನಿಮಗೆ ಆಫೀಸ್‌‌ನಲ್ಲಿ ಈ ಹಿಂದೆ ಯಾರಾದರು ಏನಾದರು ಮಾಡಿದರೆ ಅದಕ್ಕಾಗಿ ಅವರ ಮೇಲೆ ಇಂದಿಗೂ ಕೋಪ ಮಾಡುತ್ತ ಕೂರುತ್ತೀರಿ. ಇದರಿಂದ ಕೆಲಸ ಮಾಡುವಲ್ಲಿ ನಿಮಗೆ ಸಹಕಾರ ಸಿಗೋದಿಲ್ಲ.ಇಲ್ಲಿ ಓದಿ:-ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದ್ರೂ ನಿಮ್ಮನ್ನು ನಂಬುತ್ತಾರೆ…

  • ಯಾವಾಗಲೂ ಬರೀ ಕೆಲಸದಲ್ಲೇ ತಲ್ಲೀನರಾಗದೆ, ನಿಮ್ಮ ಬೇರೆ ಮನರಂಜನೆ ಕಾರ್ಯಕ್ರಮಗಳಿಗೆ ಸಮಯ ಕೊಡಿ.
  • ನೀವು ಶಾರೀರಿಕ ಮತ್ತು ಮಾನಸಿಕವಾಗಿ ಸಧೃಢರಾಗಿದ್ದರೆ ಮಾತ್ರ ಕೆಲಸದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಆದರೆ ನೀವು ಏನೇನೋ ತಿಂದು ಆರೋಗ್ಯ ಕೆಡಿಸಿದರೆ ಅಥವಾ ಮಾನಸಿಕವಾಗಿ ತುಂಬಾ ಕುಂದಿಹೋಗಿದ್ದರೆ ಕೆಲಸ ಮಾಡಲು ಸಾಧ್ಯವಿಲ್ಲ.

  • ಕೆಲಸದ ಅವಧಿಯಲ್ಲಿ ಹೆಚ್ಚಿನ ಸಮಯ ಸೋಶಿಯಲ್‌ ಮೀಡಿಯಾ ನೋಡುತ್ತ ಕಳೆದರೆ ನಿಮಗೆ ಯಶಸ್ಸು ಸಿಗಲು ಹೇಗೆ ಸಾಧ್ಯ ಹೇಳಿ. ಇದರಿಂದ ಸಮಯ ವೇಸ್ಟ್‌ ಆಗುತ್ತದೆ ಅಷ್ಟೆ.
  • ಕೊನೆಯದಾಗಿ ಏನೆಂದರೆ ನೀವು ಯಶಸ್ಸು ಸಾಧಿಸಬೇಕು ಎಂದಾದರೆ ಜೀವನದಲ್ಲಿ ಏನಾದರು ರಿಸ್ಕ್ ತೆಗೆದುಕೊಳ್ಳಲು ರೆಡಿಯಾಗಿರಬೇಕು. ಇಲ್ಲವಾದರೆ ಸಕ್ಸಸ್‌ ನಿಮ್ಮತ್ತ ಸುಳಿಯೋದೆ ಇಲ್ಲ.

ಈ ಯಶಸ್ಸು ಅನ್ನೋದು ಮರೀಚಿಕೆಯಂತೆ. ನೀವು ಅದರ ಹಿಂದೆ ಓಡಿದಷ್ಟು ಅದು ನಿಮ್ಮಿಂದ ದೂರ ಓಡುತ್ತದೆ. ಅದಕ್ಕೇ ಏನೋ ಕೃಷ್ಣ ಹೇಳಿದ್ದು :- ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತ. ಅಂದರೆ ಫಲದ ಅಪೇಕ್ಷೆ ಇಲ್ಲದೇ ನಿನ್ನ ಕರ್ಮ (ಕರ್ತವ್ಯ) ನೀನು ಮಾಡು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…