ಉಪಯುಕ್ತ ಮಾಹಿತಿ

ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

4447

ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

ಯಶಸ್ಸಿನ ಹಾದಿ ಸುಲಭವಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಒಬ್ಬ ಯಶಸ್ವಿ ಮನುಷ್ಯನ ಹಿಂದೆ ಸಾಕಷ್ಟು ಹೋರಾಟವಿರುತ್ತದೆ. ನಮ್ಮ ಪ್ರೀತಿಯ ಮೇಷ್ಟ್ರು ದಿವಂಗತ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರು ಹೇಳುತ್ತಾರೆ: “ಯಶಸ್ಸಿನ ಕಥೆಯನ್ನು ಓದಿದರೆ ಕೇವಲ ನಿಮಗೊಂದು ಸಂದೇಶ ಸಿಗಬಹುದು ಆದರೆ ಸೋಲಿನ ಕಥೆಗಳಿಂದ ಗೆಲುವಿನ ದಾರಿಯಲ್ಲಿ ಸಹಾಯವಾಗುವುದು” ಎಂದು.

 

ಯಶಸ್ಸಿನ ಹಾದಿಯಲ್ಲಿ ಈ ಅಂಶಗಳನ್ನು ಅನುಸರಿಸಿ, ನಡೆಯುವ ದಾರಿಯನು ಸುಗಮಗೊಳಿಸಿ

  • ಮೊಟ್ಟಮೊದಲನೇಯದಾಗಿ ನಿಮ್ಮನ್ನು ನೀವು ಬೇರೆಯವರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿಯೊಬ್ಬನ ಹೋರಾಟ ಬೇರೆಯೇ
  • ನಿಮಗೆ ಕೊಟ್ಟ ಎಲ್ಲಾ ಕೆಲಸಗಳು ತುಂಬಾನೆ ಸುಲಭವಾಗಿರುತ್ತವೆ. ಆದರೆ ಅದನ್ನು ಮಾಡಲು ನೀವು ಸೋಮಾರಿತನ ಮಾಡಿ, ನಾಳೆ ಮಾಡುತ್ತೇನೆ ಎಂದು ಮುಂದೂಡುತ್ತಿದ್ದರೆ ಯಶಸ್ಸು ಕಷ್ಟ.

  • ಯಾರೊಂದಿಗೂ ಪೈಪೋಟಿ ಮಾಡಬೇಡಿ. ಅದರಿಂದ ಅಸಮಾಧಾನ ಅತೃಪ್ತಿಯ ವಿನಃ ಏನೂ ಪ್ರಯೋಜನವಿಲ್ಲ.
  • ಯಶಸ್ಸಿನ ಹಾದಿಯಲ್ಲಿ ಮಾರ್ಗದರ್ಶಕರಿರಲಿ ಆದರೆ ಇನ್ನೊಬ್ಬರ ಮೇಲೆ ಅವಲಂಬಿಸಬೇಡಿ. ನಿಮ್ಮ ದಾರಿಯಲ್ಲಿ ನೀವೇ ನಡೆಯಬೇಕು
  • ಎಲ್ಲದಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವಿರಲಿ. ಅನುಮಾನದಿಂದ ಮಾಡಿದ ಯಾವ ಕೆಲಸವೂ ಯಶಸ್ವಿಯಾಗುವುದಿಲ್ಲ.

  • ಆತ್ಮೀಯರೊಂದಿಗೆ ಸರಿ ತಪ್ಪುಗಳ ವಿಮರ್ಶೆ ಅತ್ಯಗತ್ಯ. ಯಾರಾದರೂ ಒಳ್ಳೆಯ ಸಲಹೆ ಕೊಟ್ಟರೆ ಪರಗಣಿಸದಿದ್ದರೂ ಸರಿ ನಿರಾಕರಿಸಬೇಡಿ.
  • ನೀವು ಯಶಸ್ವಿಯಾಗಲು ಮತ್ತೊಬ್ಬರನ್ನು ತುಳಿಯಬೇಡಿ. ಒಂದೊಮ್ಮೆ ನೀವು ಯಶಸ್ವಿಯಾದರೂ ಆ ಅಪರಾಧಿ ಪ್ರಜ್ಞೆ ಬಾಧಿಸದೇ ಬಿಡದು.
  • ಯಾವುದೇ ಕೆಲಸದ ಕುರಿತಂತೆ ಒಂದು ಒಳ್ಳೆ ಗಟ್ಟಿ ನಿರ್ಧಾರ ತೆಗೆದುಕೊಂಡು ಮುನ್ನೆಡೆಯಿರಿ.
  • ನಿಮಗೆ ಆಫೀಸ್‌‌ನಲ್ಲಿ ಈ ಹಿಂದೆ ಯಾರಾದರು ಏನಾದರು ಮಾಡಿದರೆ ಅದಕ್ಕಾಗಿ ಅವರ ಮೇಲೆ ಇಂದಿಗೂ ಕೋಪ ಮಾಡುತ್ತ ಕೂರುತ್ತೀರಿ. ಇದರಿಂದ ಕೆಲಸ ಮಾಡುವಲ್ಲಿ ನಿಮಗೆ ಸಹಕಾರ ಸಿಗೋದಿಲ್ಲ.ಇಲ್ಲಿ ಓದಿ:-ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದ್ರೂ ನಿಮ್ಮನ್ನು ನಂಬುತ್ತಾರೆ…

  • ಯಾವಾಗಲೂ ಬರೀ ಕೆಲಸದಲ್ಲೇ ತಲ್ಲೀನರಾಗದೆ, ನಿಮ್ಮ ಬೇರೆ ಮನರಂಜನೆ ಕಾರ್ಯಕ್ರಮಗಳಿಗೆ ಸಮಯ ಕೊಡಿ.
  • ನೀವು ಶಾರೀರಿಕ ಮತ್ತು ಮಾನಸಿಕವಾಗಿ ಸಧೃಢರಾಗಿದ್ದರೆ ಮಾತ್ರ ಕೆಲಸದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಆದರೆ ನೀವು ಏನೇನೋ ತಿಂದು ಆರೋಗ್ಯ ಕೆಡಿಸಿದರೆ ಅಥವಾ ಮಾನಸಿಕವಾಗಿ ತುಂಬಾ ಕುಂದಿಹೋಗಿದ್ದರೆ ಕೆಲಸ ಮಾಡಲು ಸಾಧ್ಯವಿಲ್ಲ.

  • ಕೆಲಸದ ಅವಧಿಯಲ್ಲಿ ಹೆಚ್ಚಿನ ಸಮಯ ಸೋಶಿಯಲ್‌ ಮೀಡಿಯಾ ನೋಡುತ್ತ ಕಳೆದರೆ ನಿಮಗೆ ಯಶಸ್ಸು ಸಿಗಲು ಹೇಗೆ ಸಾಧ್ಯ ಹೇಳಿ. ಇದರಿಂದ ಸಮಯ ವೇಸ್ಟ್‌ ಆಗುತ್ತದೆ ಅಷ್ಟೆ.
  • ಕೊನೆಯದಾಗಿ ಏನೆಂದರೆ ನೀವು ಯಶಸ್ಸು ಸಾಧಿಸಬೇಕು ಎಂದಾದರೆ ಜೀವನದಲ್ಲಿ ಏನಾದರು ರಿಸ್ಕ್ ತೆಗೆದುಕೊಳ್ಳಲು ರೆಡಿಯಾಗಿರಬೇಕು. ಇಲ್ಲವಾದರೆ ಸಕ್ಸಸ್‌ ನಿಮ್ಮತ್ತ ಸುಳಿಯೋದೆ ಇಲ್ಲ.

ಈ ಯಶಸ್ಸು ಅನ್ನೋದು ಮರೀಚಿಕೆಯಂತೆ. ನೀವು ಅದರ ಹಿಂದೆ ಓಡಿದಷ್ಟು ಅದು ನಿಮ್ಮಿಂದ ದೂರ ಓಡುತ್ತದೆ. ಅದಕ್ಕೇ ಏನೋ ಕೃಷ್ಣ ಹೇಳಿದ್ದು :- ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತ. ಅಂದರೆ ಫಲದ ಅಪೇಕ್ಷೆ ಇಲ್ಲದೇ ನಿನ್ನ ಕರ್ಮ (ಕರ್ತವ್ಯ) ನೀನು ಮಾಡು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

    ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.