ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.

4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.