ಉಪಯುಕ್ತ ಮಾಹಿತಿ

ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

1356

 ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –

ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.