ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…