ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.