ಸುದ್ದಿ

ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

34

ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್‌ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್‌’ ಹಾಕಿರುವುದರಿಂದ ಈ ಜ್ಯೂಸ್‌ಗೆ ‘ಬಬಲ್‌ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್‌ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್‌ನ ಟೀ ಅಂಗಡಿ ಮಾಲೀಕ ಲಿಯು ಹನ್‌-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್‌ ಮಿಲ್ಕ್‌ ಟೀಗೆ ಯಮ್‌, ಹಣ್ಣುಗಳು, ಸಿರಪ್‌ಗಳು ಹಾಗೂ ಟ್ಯಾಪಿಕೊ ಬಾಲ್‌ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್‌ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್‌ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್‌ ಮತ್ತು ಸಿರಪ್‌ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್‌ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್‌ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್‌ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್‌ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್‌ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ

ಅಲ್ಲದೆ ಬಬಲ್‌ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…