ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…