ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.