ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…