News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

56

ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್‌ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್‌’ ಹಾಕಿರುವುದರಿಂದ ಈ ಜ್ಯೂಸ್‌ಗೆ ‘ಬಬಲ್‌ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್‌ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್‌ನ ಟೀ ಅಂಗಡಿ ಮಾಲೀಕ ಲಿಯು ಹನ್‌-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್‌ ಮಿಲ್ಕ್‌ ಟೀಗೆ ಯಮ್‌, ಹಣ್ಣುಗಳು, ಸಿರಪ್‌ಗಳು ಹಾಗೂ ಟ್ಯಾಪಿಕೊ ಬಾಲ್‌ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್‌ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್‌ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್‌ ಮತ್ತು ಸಿರಪ್‌ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್‌ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್‌ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್‌ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್‌ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್‌ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ

ಅಲ್ಲದೆ ಬಬಲ್‌ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • Health

    ಬಾಯಿ ಹುಣ್ಣಾಗಿ ಏನೂ ತಿನ್ನೋಕೆ ಆಗ್ತಿಲ್ವಾ..? ಇಲ್ಲಿದೆ ನೋಡಿ ಮನೆಮದ್ದು.

    ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…