ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ?

ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ ತಲುಪಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಜನರು ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ. ಹೌದು ನಾವೆಲ್ಲರೂ ಹಾಕಿಸಿಕೊಳ್ಳುತ್ತಿರುವ ಟ್ಯಾಟೂವಿನಿಂದ ಎಚ್ಐವಿ, ಮಲೇರಿಯಾ ಮತ್ತು ಡೆಂಘಿನಂತಹ ಭಯಾನಕ ಮತ್ತು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಎಂಬ ಸತ್ಯವನ್ನು ಆ್ಯಕ್ಷನ್ ವೆಲ್ನೆಸ್ ಆರ್ಗನೈಸೇಷನ್ ಸಾಬೀತುಪಡಿಸಿದೆ. ಇನ್ನೂ ಈ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ನಿರ್ಲಕ್ಷ್ಯ.

ಟ್ಯಾಟೂ ಬಗೆಗೆ ಏನೂ ತಿಳಿಯದೇ ಎಷ್ಟೋ ಮಂದಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಹಚ್ಚೆ ಹಾಕಿಸಿಕೊಳ್ಳುವ ವೇಳೆ ಕೊಂಚವು ಸಹ ಕಾಳಜಿ ವಹಿಸುವುದಿಲ್ಲ. ಎಂಬುವುದೇ ಈ ಎಲ್ಲಾ ಕಾಯಿಲೆಗಳಿಗೆ ಮುಖ್ಯ ಕಾರಣವಾಗಿದೆ.ಟ್ಯಾಟೂ ಹಾಕಲು ಇಂಕು ಮತ್ತು ಸೂಜಿ ಮುಂತಾದ ಕಾರಣಗಳಿಂದ ರೋಗಗಳು ಹರಡುತ್ತವೆ. ಇನ್ನೂ ಆರಂಭದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವಾಗ ಮಾಡುವ ನಿರ್ಲಕ್ಷ್ಯ ಭವಿಷ್ಯದಲ್ಲಿ ನಿಮಗೆ ಕೇಡುಕಾಗಬಹುದು.

ಸಾಮನ್ಯವಾಗಿ ಟ್ಯಾಟೂ ಹಾಕುವಾಗ ಚರ್ಮದೊಳಗೆ ಬಣ್ಣವನ್ನು ಹಾಕುತ್ತಾರೆ. ಇದರಿಂದಾಗಿ ಸೂಜಿ ಚುಚ್ಚಿ ರಕ್ತದ ಸಂಪರ್ಕದಲ್ಲಿರುತ್ತದೆ. ನಿಮಗಿಂತ ಮೊದಲು ಬಂದಿದ್ದ ವ್ಯಕ್ತಿ ಎಚ್ಐವಿ, ಮಲೇರಿಯಾ ಮತ್ತು ಡೆಂಘಿ ರೋಗಗಳಿದ್ದರೆ , ಅವರಿಗೆ ಇದೇ ಸೂಜಿಯನ್ನು ಬಳಸಿದ್ದರೆ ಅವರಿಗಿದ್ದ ರೋಗಗಳು ನಿಮಗೆ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.ಹಾಗಾಗಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಟ್ಯಾಟೂ ಸೂಜಿಯನ್ನು ಸರಿಯಾಗಿ ಸ್ವಚ್ಛಗೊಳಿಸಿದ್ದಾನೆಯೇ ಎಂದು ಗಮನಿಸಬೇಕು. ಇಲ್ಲ ಹೊಸ ಸೂಜಿಯನ್ನು ಬಳಸಿದರೆ ಇನ್ನೂ ಉತ್ತಮ.

ಆದರೆ ಸ್ವಚ್ಛಗೊಳಿಸದ ಹಳೆಯ ಸೂಜಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ.ಟ್ಯಾಟೂ ಹಾಕುವ ವೇಳೆ ಸೂಜಿ ಬಳಕೆ ಬಗ್ಗೆ ಅತೀ ಎಚ್ಚರವಹಿಸಬೇಕು. ಜೊತೆಗೆ ಹಚ್ಚೆ ಹಾಕುವ ಮೊದಲು, ಟ್ಯಾಟೂ ಮಿಶನ್ನ್ನು ಸ್ವಚ್ಛತಾ ಕ್ರಿಮಿನಾಶಕ ಬಳಸಿ ಶುದ್ಧಗೊಳಿಸಿದ್ದಾನೆಯೇ ಎಂದು ಪರೀಕ್ಷಿಸಿ,ಹಾಗೆಯೇ ಹಚ್ಚೆ ಹಾಕಿಸಿಕೊಳ್ಳಬೇಕಾದ ನಿಮ್ಮ ದೇಹದ ಭಾಗವನ್ನು ಸಹ ಸಂಪೂರ್ಣ ಸ್ವಚ್ಛಗೊಳಿಸಲು ಮರೆಯಬೇಡಿ.

ಅಲ್ಲದೆ ಲೈಸೆನ್ಸ್ ಪಡೆದಿರುವ ಟ್ಯಾಟೂ ಆರ್ಟಿಸ್ಟ್ಗಳಿಂದ ಮಾತ್ರ ಹಚ್ಚೆ ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ರಸ್ತೆಬದಿಯಲ್ಲಿ ಹಚ್ಚೆ ಹಾಕಿಸಿಕೊಳ್ಳುವವರ ಹತ್ತಿರ ಹಚ್ಚೆ ಹಾಕಿಸಿಕೊಳ್ಳಬೇಡಿ. ಕಾರಣ ಇಂತಹ ಸ್ಥಳಗಳಲ್ಲಿ ಕಳಪೆ ಇಂಕ್ ಗುಣಮಟ್ಟ ಕಡಿಮೆ ಇರುತ್ತದೆ ಜೊತೆಗೆ ಒಂದೇ ಸೂಜಿಯಲ್ಲಿ ಎಷ್ಟೊ ಜನರಿಗೆ ಹಚ್ಚೆ ಹಾಕಿರುತ್ತಾರೆ.ಹಾಗೆಯೇ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮದ್ಯಪಾನ ಅಥವಾ ಕೆಫೇನ್ ಅಂಶವಿರುವ ವಸ್ತುಗಳನ್ನು ಸೇವಿಸಬಾರದು. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಸಾಕಷ್ಟು ನೀರು ಕುಡಿಯಬೇಕಿರುವುದು ಅತ್ಯವಶ್ಯಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.