ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ?

ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ ತಲುಪಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಜನರು ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ. ಹೌದು ನಾವೆಲ್ಲರೂ ಹಾಕಿಸಿಕೊಳ್ಳುತ್ತಿರುವ ಟ್ಯಾಟೂವಿನಿಂದ ಎಚ್ಐವಿ, ಮಲೇರಿಯಾ ಮತ್ತು ಡೆಂಘಿನಂತಹ ಭಯಾನಕ ಮತ್ತು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಎಂಬ ಸತ್ಯವನ್ನು ಆ್ಯಕ್ಷನ್ ವೆಲ್ನೆಸ್ ಆರ್ಗನೈಸೇಷನ್ ಸಾಬೀತುಪಡಿಸಿದೆ. ಇನ್ನೂ ಈ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ನಿರ್ಲಕ್ಷ್ಯ.

ಟ್ಯಾಟೂ ಬಗೆಗೆ ಏನೂ ತಿಳಿಯದೇ ಎಷ್ಟೋ ಮಂದಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಹಚ್ಚೆ ಹಾಕಿಸಿಕೊಳ್ಳುವ ವೇಳೆ ಕೊಂಚವು ಸಹ ಕಾಳಜಿ ವಹಿಸುವುದಿಲ್ಲ. ಎಂಬುವುದೇ ಈ ಎಲ್ಲಾ ಕಾಯಿಲೆಗಳಿಗೆ ಮುಖ್ಯ ಕಾರಣವಾಗಿದೆ.ಟ್ಯಾಟೂ ಹಾಕಲು ಇಂಕು ಮತ್ತು ಸೂಜಿ ಮುಂತಾದ ಕಾರಣಗಳಿಂದ ರೋಗಗಳು ಹರಡುತ್ತವೆ. ಇನ್ನೂ ಆರಂಭದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವಾಗ ಮಾಡುವ ನಿರ್ಲಕ್ಷ್ಯ ಭವಿಷ್ಯದಲ್ಲಿ ನಿಮಗೆ ಕೇಡುಕಾಗಬಹುದು.

ಸಾಮನ್ಯವಾಗಿ ಟ್ಯಾಟೂ ಹಾಕುವಾಗ ಚರ್ಮದೊಳಗೆ ಬಣ್ಣವನ್ನು ಹಾಕುತ್ತಾರೆ. ಇದರಿಂದಾಗಿ ಸೂಜಿ ಚುಚ್ಚಿ ರಕ್ತದ ಸಂಪರ್ಕದಲ್ಲಿರುತ್ತದೆ. ನಿಮಗಿಂತ ಮೊದಲು ಬಂದಿದ್ದ ವ್ಯಕ್ತಿ ಎಚ್ಐವಿ, ಮಲೇರಿಯಾ ಮತ್ತು ಡೆಂಘಿ ರೋಗಗಳಿದ್ದರೆ , ಅವರಿಗೆ ಇದೇ ಸೂಜಿಯನ್ನು ಬಳಸಿದ್ದರೆ ಅವರಿಗಿದ್ದ ರೋಗಗಳು ನಿಮಗೆ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.ಹಾಗಾಗಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಟ್ಯಾಟೂ ಸೂಜಿಯನ್ನು ಸರಿಯಾಗಿ ಸ್ವಚ್ಛಗೊಳಿಸಿದ್ದಾನೆಯೇ ಎಂದು ಗಮನಿಸಬೇಕು. ಇಲ್ಲ ಹೊಸ ಸೂಜಿಯನ್ನು ಬಳಸಿದರೆ ಇನ್ನೂ ಉತ್ತಮ.

ಆದರೆ ಸ್ವಚ್ಛಗೊಳಿಸದ ಹಳೆಯ ಸೂಜಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ.ಟ್ಯಾಟೂ ಹಾಕುವ ವೇಳೆ ಸೂಜಿ ಬಳಕೆ ಬಗ್ಗೆ ಅತೀ ಎಚ್ಚರವಹಿಸಬೇಕು. ಜೊತೆಗೆ ಹಚ್ಚೆ ಹಾಕುವ ಮೊದಲು, ಟ್ಯಾಟೂ ಮಿಶನ್ನ್ನು ಸ್ವಚ್ಛತಾ ಕ್ರಿಮಿನಾಶಕ ಬಳಸಿ ಶುದ್ಧಗೊಳಿಸಿದ್ದಾನೆಯೇ ಎಂದು ಪರೀಕ್ಷಿಸಿ,ಹಾಗೆಯೇ ಹಚ್ಚೆ ಹಾಕಿಸಿಕೊಳ್ಳಬೇಕಾದ ನಿಮ್ಮ ದೇಹದ ಭಾಗವನ್ನು ಸಹ ಸಂಪೂರ್ಣ ಸ್ವಚ್ಛಗೊಳಿಸಲು ಮರೆಯಬೇಡಿ.

ಅಲ್ಲದೆ ಲೈಸೆನ್ಸ್ ಪಡೆದಿರುವ ಟ್ಯಾಟೂ ಆರ್ಟಿಸ್ಟ್ಗಳಿಂದ ಮಾತ್ರ ಹಚ್ಚೆ ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ರಸ್ತೆಬದಿಯಲ್ಲಿ ಹಚ್ಚೆ ಹಾಕಿಸಿಕೊಳ್ಳುವವರ ಹತ್ತಿರ ಹಚ್ಚೆ ಹಾಕಿಸಿಕೊಳ್ಳಬೇಡಿ. ಕಾರಣ ಇಂತಹ ಸ್ಥಳಗಳಲ್ಲಿ ಕಳಪೆ ಇಂಕ್ ಗುಣಮಟ್ಟ ಕಡಿಮೆ ಇರುತ್ತದೆ ಜೊತೆಗೆ ಒಂದೇ ಸೂಜಿಯಲ್ಲಿ ಎಷ್ಟೊ ಜನರಿಗೆ ಹಚ್ಚೆ ಹಾಕಿರುತ್ತಾರೆ.ಹಾಗೆಯೇ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮದ್ಯಪಾನ ಅಥವಾ ಕೆಫೇನ್ ಅಂಶವಿರುವ ವಸ್ತುಗಳನ್ನು ಸೇವಿಸಬಾರದು. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಸಾಕಷ್ಟು ನೀರು ಕುಡಿಯಬೇಕಿರುವುದು ಅತ್ಯವಶ್ಯಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…