ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ?

ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ ತಲುಪಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಜನರು ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ. ಹೌದು ನಾವೆಲ್ಲರೂ ಹಾಕಿಸಿಕೊಳ್ಳುತ್ತಿರುವ ಟ್ಯಾಟೂವಿನಿಂದ ಎಚ್ಐವಿ, ಮಲೇರಿಯಾ ಮತ್ತು ಡೆಂಘಿನಂತಹ ಭಯಾನಕ ಮತ್ತು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಎಂಬ ಸತ್ಯವನ್ನು ಆ್ಯಕ್ಷನ್ ವೆಲ್ನೆಸ್ ಆರ್ಗನೈಸೇಷನ್ ಸಾಬೀತುಪಡಿಸಿದೆ. ಇನ್ನೂ ಈ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ನಿರ್ಲಕ್ಷ್ಯ.

ಟ್ಯಾಟೂ ಬಗೆಗೆ ಏನೂ ತಿಳಿಯದೇ ಎಷ್ಟೋ ಮಂದಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಹಚ್ಚೆ ಹಾಕಿಸಿಕೊಳ್ಳುವ ವೇಳೆ ಕೊಂಚವು ಸಹ ಕಾಳಜಿ ವಹಿಸುವುದಿಲ್ಲ. ಎಂಬುವುದೇ ಈ ಎಲ್ಲಾ ಕಾಯಿಲೆಗಳಿಗೆ ಮುಖ್ಯ ಕಾರಣವಾಗಿದೆ.ಟ್ಯಾಟೂ ಹಾಕಲು ಇಂಕು ಮತ್ತು ಸೂಜಿ ಮುಂತಾದ ಕಾರಣಗಳಿಂದ ರೋಗಗಳು ಹರಡುತ್ತವೆ. ಇನ್ನೂ ಆರಂಭದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವಾಗ ಮಾಡುವ ನಿರ್ಲಕ್ಷ್ಯ ಭವಿಷ್ಯದಲ್ಲಿ ನಿಮಗೆ ಕೇಡುಕಾಗಬಹುದು.

ಸಾಮನ್ಯವಾಗಿ ಟ್ಯಾಟೂ ಹಾಕುವಾಗ ಚರ್ಮದೊಳಗೆ ಬಣ್ಣವನ್ನು ಹಾಕುತ್ತಾರೆ. ಇದರಿಂದಾಗಿ ಸೂಜಿ ಚುಚ್ಚಿ ರಕ್ತದ ಸಂಪರ್ಕದಲ್ಲಿರುತ್ತದೆ. ನಿಮಗಿಂತ ಮೊದಲು ಬಂದಿದ್ದ ವ್ಯಕ್ತಿ ಎಚ್ಐವಿ, ಮಲೇರಿಯಾ ಮತ್ತು ಡೆಂಘಿ ರೋಗಗಳಿದ್ದರೆ , ಅವರಿಗೆ ಇದೇ ಸೂಜಿಯನ್ನು ಬಳಸಿದ್ದರೆ ಅವರಿಗಿದ್ದ ರೋಗಗಳು ನಿಮಗೆ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.ಹಾಗಾಗಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಟ್ಯಾಟೂ ಸೂಜಿಯನ್ನು ಸರಿಯಾಗಿ ಸ್ವಚ್ಛಗೊಳಿಸಿದ್ದಾನೆಯೇ ಎಂದು ಗಮನಿಸಬೇಕು. ಇಲ್ಲ ಹೊಸ ಸೂಜಿಯನ್ನು ಬಳಸಿದರೆ ಇನ್ನೂ ಉತ್ತಮ.

ಆದರೆ ಸ್ವಚ್ಛಗೊಳಿಸದ ಹಳೆಯ ಸೂಜಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ.ಟ್ಯಾಟೂ ಹಾಕುವ ವೇಳೆ ಸೂಜಿ ಬಳಕೆ ಬಗ್ಗೆ ಅತೀ ಎಚ್ಚರವಹಿಸಬೇಕು. ಜೊತೆಗೆ ಹಚ್ಚೆ ಹಾಕುವ ಮೊದಲು, ಟ್ಯಾಟೂ ಮಿಶನ್ನ್ನು ಸ್ವಚ್ಛತಾ ಕ್ರಿಮಿನಾಶಕ ಬಳಸಿ ಶುದ್ಧಗೊಳಿಸಿದ್ದಾನೆಯೇ ಎಂದು ಪರೀಕ್ಷಿಸಿ,ಹಾಗೆಯೇ ಹಚ್ಚೆ ಹಾಕಿಸಿಕೊಳ್ಳಬೇಕಾದ ನಿಮ್ಮ ದೇಹದ ಭಾಗವನ್ನು ಸಹ ಸಂಪೂರ್ಣ ಸ್ವಚ್ಛಗೊಳಿಸಲು ಮರೆಯಬೇಡಿ.

ಅಲ್ಲದೆ ಲೈಸೆನ್ಸ್ ಪಡೆದಿರುವ ಟ್ಯಾಟೂ ಆರ್ಟಿಸ್ಟ್ಗಳಿಂದ ಮಾತ್ರ ಹಚ್ಚೆ ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ರಸ್ತೆಬದಿಯಲ್ಲಿ ಹಚ್ಚೆ ಹಾಕಿಸಿಕೊಳ್ಳುವವರ ಹತ್ತಿರ ಹಚ್ಚೆ ಹಾಕಿಸಿಕೊಳ್ಳಬೇಡಿ. ಕಾರಣ ಇಂತಹ ಸ್ಥಳಗಳಲ್ಲಿ ಕಳಪೆ ಇಂಕ್ ಗುಣಮಟ್ಟ ಕಡಿಮೆ ಇರುತ್ತದೆ ಜೊತೆಗೆ ಒಂದೇ ಸೂಜಿಯಲ್ಲಿ ಎಷ್ಟೊ ಜನರಿಗೆ ಹಚ್ಚೆ ಹಾಕಿರುತ್ತಾರೆ.ಹಾಗೆಯೇ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮದ್ಯಪಾನ ಅಥವಾ ಕೆಫೇನ್ ಅಂಶವಿರುವ ವಸ್ತುಗಳನ್ನು ಸೇವಿಸಬಾರದು. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಸಾಕಷ್ಟು ನೀರು ಕುಡಿಯಬೇಕಿರುವುದು ಅತ್ಯವಶ್ಯಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…