ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.
ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?
ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ. ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?
ಟ್ರೂ ಕಾಲರ್ ಆಪ್ ಇನ್ಸ್ಟಾಲ್ ಮಾಡಿದ ನಮ್ಮ ಮೊಬೈಲ್ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?
ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?
ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.
ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.
ಯಾಕೆ ಉಪಯೋಗಿಸಬಾರದು?
ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.
ನಾವೇನು ಮಾಡಬೇಕು?
ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.
ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…