ಗ್ಯಾಜೆಟ್

ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

2763

ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್‍ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್‍ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.

ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?

ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ.   ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?

ಟ್ರೂ ಕಾಲರ್ ಆಪ್ ಇನ್‌ಸ್ಟಾಲ್ ಮಾಡಿದ ನಮ್ಮ ಮೊಬೈಲ್‌ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?

ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?

ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ  ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ  ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.

ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.

ಯಾಕೆ ಉಪಯೋಗಿಸಬಾರದು?

ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್‍ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.

ನಾವೇನು ಮಾಡಬೇಕು?

ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.

ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಸುದ್ದಿ

    ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

    ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ.  ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…

  • inspirational, ಸುದ್ದಿ

    ಕ್ವಾರಂಟೈನ್‌ ಸಮಯವನ್ನು ವ್ಯರ್ಥ ಮಾಡದೇ, ಗಣೇಶ ವಿಗ್ರಹ ರಚಿಸಿದ ಕಲೆಗಾರ. ಸಿಕ್ಕ ಬೆಲೆಯೆಷ್ಟು ಗೊತ್ತಾ?

    ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್‌ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…