News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

2782

ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್‍ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್‍ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.

ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?

ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ.   ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?

ಟ್ರೂ ಕಾಲರ್ ಆಪ್ ಇನ್‌ಸ್ಟಾಲ್ ಮಾಡಿದ ನಮ್ಮ ಮೊಬೈಲ್‌ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?

ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?

ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ  ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ  ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.

ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.

ಯಾಕೆ ಉಪಯೋಗಿಸಬಾರದು?

ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್‍ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.

ನಾವೇನು ಮಾಡಬೇಕು?

ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.

ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…