News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

2781

ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್‍ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್‍ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.

ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?

ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ.   ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?

ಟ್ರೂ ಕಾಲರ್ ಆಪ್ ಇನ್‌ಸ್ಟಾಲ್ ಮಾಡಿದ ನಮ್ಮ ಮೊಬೈಲ್‌ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?

ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?

ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ  ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ  ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.

ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.

ಯಾಕೆ ಉಪಯೋಗಿಸಬಾರದು?

ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್‍ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.

ನಾವೇನು ಮಾಡಬೇಕು?

ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.

ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…