ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.
ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?
ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ. ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?
ಟ್ರೂ ಕಾಲರ್ ಆಪ್ ಇನ್ಸ್ಟಾಲ್ ಮಾಡಿದ ನಮ್ಮ ಮೊಬೈಲ್ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?
ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?
ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.
ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.
ಯಾಕೆ ಉಪಯೋಗಿಸಬಾರದು?
ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.
ನಾವೇನು ಮಾಡಬೇಕು?
ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.
ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…