ಸುದ್ದಿ

ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

55

ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.


ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್‌ಬಿಐ ಕಾನೂನುಗಳ ಪ್ರಕಾರವ್ಯಾಲೆಟ್‌ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ. 


ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್‌ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್‌ಗಳು ಈಗಾಗಲೇ ಫೋನ್‌ಪೆಯಲ್ಲಿ ಆಫ್‌ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್‌ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್‌ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್‌ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್‌ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.

ಫೋನ್‌ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್‌ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ :  ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್‌ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್‌ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್‌ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್‌ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…