ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.

ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್ಬಿಐ ಕಾನೂನುಗಳ ಪ್ರಕಾರವ್ಯಾಲೆಟ್ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ.
ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್ಗಳು ಈಗಾಗಲೇ ಫೋನ್ಪೆಯಲ್ಲಿ ಆಫ್ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.
ಫೋನ್ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್ಫಾರ್ಮ್ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ : ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…