ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಭದ್ರತಾ ಕಾರಣಗಳಿಗಾಗಿ ಬಾಬಾ ಬಂಧಿಯಾಗಿರುವ ರೋಹ್ಟಕ್ ಜೈಲಿನಲ್ಲೇ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಯಿತು. ಶಿಕ್ಷೆಯ ಪ್ರಮಾಣ ವಿಚಾರದಲ್ಲಿ ತಮ್ಮ ತಮ್ಮ ವಾದ ಮಂಡಿಸಲು ಎರಡೂ ಕಡೆಯ ವಕೀಲರಿಗೆ ಅವಕಾಶ ನೀಡಲಾಯಿತು.
ರೋಹ್ತಕ್ ಜೈಲಿನಿಂದಲೇ ಸಂಜೆ 3.20ರ ವೇಳೆಗೆ ಬಾಬಾ ರಾಮ್ ರಹೀಂಗೆ ಶಿಕ್ಷೆ ಪ್ರಮಾಣವನ್ನು ನ್ಯಾಯಾಧೀಶ ಜಗದೀಪ್ ಸಿಂಗ್ ಪ್ರಕಟಿಸಿದರು.
ಬಾಬಾನಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲು ಪಂಚಕುಲಾದ ಸಿಬಿಐ ಕೋರ್ಟ್, 250 ಕಿಲೋಮೀಟರ್ ದೂರದ ರೋಹ್ಟಕ್ನ ಸೊನಾರಿಯಾ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಆಗಿತ್ತು. ನ್ಯಾಯಾಧೀಶ ಜಗದೀಪ್ ಸಿಂಗ್ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ ಜೈಲಿಗೆ ಆಗಮಿಸಿದ್ದರು.
ತಮ್ಮ ವಾದ ಮಂಡಿಸಿದ ಸರ್ಕಾರಿ ವಕೀಲರು, ಬಾಬಾಗೆ ಜೀವಾವಧಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಅತ್ತ, ಬಾಬಾ ಪರ ವಕೀಲರು ಬಾಬಾ ಮಾಡಿರುವ ಸಮಾಜ ಕಲ್ಯಾಣ ಕಾರ್ಯಗಳನ್ನು ಪರಿಗಣಿಸಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಮನವಿ ಸಲ್ಲಿಸಿದರು.
ನ್ಯಾಯಮೂರ್ತಿಗಳಿಂದ ಶಿಕ್ಷೆ ಪ್ರಕಟ :-
ನ್ಯಾಯಮೂರ್ತಿ ಜಗದೀಪ್ ಸಿಂಗ್ ಅವರು, ಐಪಿಸಿ ಸೆಕ್ಷನ್ 376, 506, 511ರ ಪ್ರಕಾರ, ಶಿಕ್ಷೆಯನ್ನು ಪ್ರಕಟಿಸಿದರು. ಐಪಿಸಿ ಸೆಕ್ಷನ್ 376ರ ಪ್ರಕಾರ ಅತ್ಯಾಚಾರ, ಸೆಕ್ಷನ್ 506ರ ಪ್ರಕಾರ ಜೀವ ಬೆದರಿಕೆ ಹಿನ್ನೆಲೆಯಲ್ಲಿ 10 ವರ್ಷ ಜೈಲು ವಾಸವನ್ನು ವಿಧಿಸಲಾಯಿತು.

ತೀರ್ಪಿನ ಹಿನ್ನಲೆಯಲ್ಲಿ ಜೈಲಿನ ಸುತ್ತ ಮುತ್ತಾ ಭದ್ರತಾ ವ್ಯವಸ್ಥೆ:-
ತೀರ್ಪಿನ ಹಿನ್ನಲೆಯಲ್ಲಿ ರೋಹ್ಟಕ್ ಜೈಲಿನ ಸುತ್ತ ಏಳು ಸುತ್ತಿನ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಜೈಲಿನಿಂದ 10 ಕಿಲೋ ಮೀಟರ್ ದೂರದವರೆಗೂ 17 ಸಾವಿರಕ್ಕೂ ಹೆಚ್ಚು ಸೇನಾ ಹಾಗೂ ಅರೆಸೇನಾ ಭದ್ರತಾ ಸಿಬ್ಬಂದಿ, ಪೊಲೀಸರನ್ನು ನೇಮಿಸಲಾಗಿತ್ತು. ಜೈಲಿನ ಸುತ್ತಮುತ್ತಾ ನಿಷೇಧಾಜ್ಞೆ ಜಾರಿಯಾಗಿದ್ದು, ಜಿಲ್ಲಾಧಿಕಾರಿ ಅವರು ಕಂಡಲ್ಲಿ ಗುಂಡಿಗೆ ಆದೇಶ ನೀಡಿದ್ದರು.
ಹರಿಯಾಣದಾದ್ಯಂತ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಸೋನೆಪತ್ ಬಳಿ ಬಾಬಾ ಬೆಂಬಲಿಗರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಬಡಿಗೆ, ಕಬ್ಬಿಣದ ಸರಳು, ಚೈನು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಇದೂವರೆಗೂ 150ಕ್ಕೂ ಹೆಚ್ಚು ಬಾಬಾನ ಪುಂಡ ಭಕ್ತರನ್ನು ಬಂಧಿಸಿರುವ ಪೊಲೀಸರು ಸಿರ್ಸಾ ಆಶ್ರಮದೊಳಗೆ ಇನ್ನೂ 10 ಸಾವಿರ ಬಾಬಾ ಬೆಂಬಲಿಗರಿದ್ದು, 24 ಗಂಟೆಯೊಳಗೆ ಖಾಲಿ ಮಾಡುವಂತೆ ಖಡಕ್ ಸೂಚನೆ ಕೂಡ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.