ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ.
ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ.
ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ ಜೊತೆ ಮಧ್ಯಪ್ರದೇಶದ ಹೋಷಂಗಾಬಾದ್ ಎಂಬಲ್ಲಿನ ‘ಸತ್ಪುರ ಟೈಗರ್ ರಿಸರ್ವ್’ಗೆ ಹೋಗಿದ್ದರು.ಈ ವೇಳೆ ಹುಲಿಯೊಂದು ಏಕಾಏಕಿ ಪೊದೆಯೊಳಗಿಂದ ಪ್ರತ್ಯಕ್ಷವಾಗಿ, ಗಣತಿಗೆಂದು ಬಂದಿದ್ದವರ ಮುಂದೆ ಘರ್ಜಿಸಲು ಆರಂಭಿಸಿತು.ಹುಲಿ ಮತ್ತು ಇವರ ನಡುವೆ ಕೇವಲ 10 ಮೀಟರ್ ಅಂತರವಿತ್ತು.
ಹುಲಿಯ ಘರ್ಜನೆ ಕೇಳಿದ್ದೇ ತಡ ಇಬ್ಬರೂ ಪುರುಷ ಗಾರ್ಡ್ಗಳು ತತ್ತರಿಸಿ ಹೋಗಿದ್ದರು.ಆಗ ಈಕೆ ತನ್ನ ಸಹೋದ್ಯೋಗಿಗಳಿಬ್ಬರಿಗೆ ಒಂದಿಂಚೂ ಕದಲದೇ ನಿಲ್ಲಿ ಎಂದಿದ್ದಾಳೆ. ಜೊತೆಗೆ ತಾನೂ ಕದಲದೇ ಹುಲಿಯನ್ನೇ ದಿಟ್ಟಿಸಿದ್ದಾಳೆ.
ಹೀಗೆ ಒಂದೆರಡು ನಿಮಿಷವಲ್ಲ, ಒಂದೂವರೆ ಗಂಟೆ ಕಳೆದ ಇವರು ಕೊನೆಗೂ ಹುಲಿಯನ್ನು ಹಾಗೆ ದಿಟ್ಟಿಸಿಯೇ ಹಿಮ್ಮೆಟ್ಟಿಸಿದ್ದಾರೆ.ಈ ಘಟನೆಯಿಂದ ಬೆಚ್ಚಿದ ಹುಲಿ, ಒಂದೂವರೆ ಗಂಟೆಗಳ ಬಳಿಕ ಸುಮ್ಮನೆ, ಮತ್ತೆ ಕಾಡಿನೊಳಗೆ ಸೇರಿಕೊಂಡಿತು.
ಮಹಿಳಾ ಅಧಿಕಾರಿಯ ಈ ಧೈರ್ಯ ಆಕೆಯ ಸಮಯಪ್ರಜ್ಞೆ ಹಾಗೂ ಸಾಮಾನ್ಯ ಜ್ಞಾನದಿಂದ ಮೂವರ ಪ್ರಾಣ ಕಾಪಾಡಿದೆ.ಮಹಿಳಾ ಅಧಿಕಾರಿಯ ಸಾಹಸ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…