News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Uncategorized, ರಾಜಕೀಯ

ತಾಜ್‌ ಮಹಲ್‌ ನಿರ್ಮಿಸಿದವರು ದ್ರೋಹಿಗಳು ಎಂದು ಹೇಳಿದ ಶಾಸಕ..!ತಿಳಿಯಲು ಈ ಲೇಖನ ಓದಿ..

283

ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.ಉತ್ತರ ಪ್ರದೇಶ ಸರಕಾರ ಈಚೆಗಷ್ಟೇ ಬಿಡುಗಡೆ ಮಾಡಿದ್ದ ಪ್ರವಾಸೋದ್ಯಮ ಪುಸ್ತಿಕೆಯಲ್ಲಿ ತಾಜ್ ಮಹಲ್ ಉಲ್ಲೇಖವನ್ನು ಕೈಬಿಡಲಾಗಿತ್ತು. ತತ್ಪರಿಣಾಮವಾಗಿ ಭಾರೀ ಟೀಕೆ, ಟಿಪ್ಪಣಿ, ವಿವಾದ ಸೃಷ್ಟಿಯಾಗಿತ್ತು.

ಅದಾಗಿ ಇದೀಗ ccc ಅವರು ‘ಐತಿಹಾಸಿಕ ತಾಜ್ಮಹಲ್ ಕಟ್ಟಡವನ್ನು ನಿರ್ಮಿಸಿದವರು ದ್ರೋಹಿಗಳು’ ಎಂದು ಹೇಳುವ ಮೂಲಕ ಇನ್ನೊಂದು ವಿವಾದವನ್ನು ಸೃಷ್ಟಿಸಿದ್ದಾರೆ.

ಸರ್ಧಾನಾ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಸೋಮ್ ಅವರು, “ಐತಿಹಾಸಿಕ ತಾಜ್ ಮಹಲ್ ಕಟ್ಟಡವನ್ನು ಕಟ್ಟಿದವರು ದ್ರೋಹಿಗಳು; ಆದುದರಿಂದ ಅದಕ್ಕೆ ಭಾರತೀಯ ಇತಿಹಾಸದಲ್ಲಿ ಯಾವುದೇ ಸ್ಥಾನ ಇಲ್ಲ’ ಎಂದು ಗುಡುಗಿದ್ದಾರೆ.

“ತಾಜ್ಮಹಲ್ ಭಾರತೀಯ ಸಂಸ್ಕೃತಿಯಲ್ಲಿನ ಒಂದು ಕಪ್ಪು ಚುಕ್ಕೆ; ಅದನ್ನು ಕಟ್ಟಿದ್ದ ಶಹಜಹಾನ್ ತನ್ನ ತಂದೆಯನ್ನೇ ಜೈಲಿಗೆ ಹಾಕಿದ್ದ’ ಎಂದು ಸೋಮ್ ಹೇಳಿದ್ದಾರೆ.

ಮೀರತ್ ಜಿಲ್ಲೆಯ ಸಿಸೋಲಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಜನರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಶಾಸಕ ಸೋಮ್ ತಾಜ್ ಮಹಲ್ ಕುರಿತಾಗಿ ತನ್ನ ಅಭಿಪ್ರಾಯಗಳನ್ನು ನಿಷ್ಠುರ ಮಾತುಗಳಲ್ಲಿ ಹೇಳಿದರು.

ಇದೇ ವೇಳೆ ಸೋಮ್, “ಮೊಹಮ್ಮದ ಅಲಿ ಜೌಹರ್ ವಿಶ್ವವಿದ್ಯಾಲಯವು ಭಯೋತ್ಪಾಕರ ಕಾರಸ್ಥಾನವಾಗಿದೆ’ ಎಂದು ಆರೋಪಿಸಿದರು.

ಸೋಮ್ ಅವರು ಈ ಹಿಂದೆಯೂ ಕೋಮು ಸಂಘರ್ಷಕ್ಕೆ ಕಾರಣವಾಗುವ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲ ಉರಿನಾಲಗೆಯ ಬಿಜೆಪಿ ಶಾಸಕ ಎಂದೇ ಪರಿಚಿತರಾಗಿದ್ದರು.

ತಾಜ್ ಮಹಲ್ ಮತ್ತು ಮೊಹಮ್ಮದ್ ಅಲಿ ಜೌಹರ್ ವಿವಿ ಕುರಿತಾದ ಸೋಮ್ ಅವರ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ದೂರ ಸರಿದಿದೆ.

“ಸೋಮ್ ಹೇಳಿರುವುದೆಲ್ಲ ಅವರ ವೈಯಕ್ತಿಕ ನೆಲೆಯಲ್ಲಿ; ಅದು ಬಿಜೆಪಿಯ ಅಭಿಪ್ರಾಯವಲ್ಲ’ ಎಂದು ಬಿಜೆಪಿ ವಕ್ತಾರ ಅನಿಲ್ ಸಿಂಗ್, ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ನೋಡಿ ಪ್ರತಿಕ್ರಿಯಿಸಿದ್ದಾರೆ.

ಹಾಗಿದ್ದರೂ ಈಚೆಗೆ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, “ಐತಿಹಾಸಿಕ ತಾಜ್ ಮಹಲ್ ಕಟ್ಟಡಕ್ಕೂ ಭಾರತೀಯ ಸಂಸ್ಕತಿ ಮತ್ತು ಪರಂಪರೆಗೂ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ