News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

47

ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ.

ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ ಅಪರೂಪ ಬಿಡಿ. ಚೆನ್ನೈನ ಕಿಲ್ಪಾಕ್ ಎಂಬಲ್ಲಿ ತನ್ನ ತಂದೆ ಸಮಾಧಿ ಪಕ್ಕದಲ್ಲೇ ರೇಖಾ ಕೂಡಾ ತಮ್ಮ ಸಮಾಧಿ ಸ್ಥಳವನ್ನು ಖರೀದಿಸಿದ್ದಾರಂತೆ. ಹೀಗಂತ ಸಂದರ್ಶನವೊಂದರಲ್ಲಿ ಅವರೇ ಹೇಳಿಕೊಂಡಿದ್ದಾರೆ. ಇದಕ್ಕೆ ಬಲವಾದ ಕಾರಣ ಕೂಡಾ ಇದೆ.

ರೇಖಾ, ತನ್ನ ತಂದೆ ವರದರಾಜ್ ಅವರನ್ನು ಬಹಳ ಇಷ್ಟಪಡುತ್ತಿದ್ದರಂತೆ. ತಂದೆ ಎಂದರೆ ಅವರಿಗೆ ಪ್ರಾಣ. ಆದರೆ ವರದರಾಜ್ ಅವರಿಗೆ ರೇಖಾ ಸಿನಿಮಾರಂಗಕ್ಕೆ ಬರುವುದು ಸ್ವಲ್ಪವೂ ಇಷ್ಟವಿರಲಿಲ್ಲವಂತೆ. ರೇಖಾ ಅವರು ನಟಿಸಿರುವ ಯಾವ ಸಿನಿಮಾವನ್ನು ಕೂಡಾ ತಂದೆ ನೋಡಿಲ್ಲವಂತೆ. ತಂದೆ ನನ್ನ ಸಿನಿಮಾಗಳನ್ನು ನೋಡಲಿಲ್ಲ ಎಂಬ ಬೇಸರ ಒಂದು ಕಡೆ ಆದರೆ, ತಂದೆ ಇಷ್ಟಕ್ಕೆ ವಿರುದ್ಧವಾದ ಕ್ಷೇತ್ರದಲ್ಲಿ ಮುಂದುವರೆದಿದ್ದಕ್ಕೆ ಅವರಿಗೆ ಪಶ್ಚಾತಾಪ ಕೂಡಾ ಇದೆಯಂತೆ.

ಆದರೆ ತನ್ನ ತಂದೆ ಸಮಾಧಿ ಪಕ್ಕದಲ್ಲೇ ತನ್ನ ಸಮಾಧಿ ಇರಬೇಕು ಎಂಬುದು ರೇಖಾ ಅವರ ಆಸೆಯಂತೆ. ಈಗಾಗಲೇ ಸೈಟ್ ಖರೀದಿಸಿದ್ದು, ತಾನು ಸತ್ತಾಗ ಅದೇ ಸ್ಥಳದಲ್ಲಿ ನನ್ನನ್ನು ಮಣ್ಣು ಮಾಡಬೇಕು ಎಂದು ಮನೆಯವರು ಹಾಗೂ ಸಂಬಂಧಿಕರ ಬಳಿ ರೇಖಾ ಮಾತು ಪಡೆದಿದ್ದಾರೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ