ಜೀವನಶೈಲಿ

ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

1157

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.

ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ  ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..

ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ  ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.

1.ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ  ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.

2.ಬೊಜ್ಜಿನ ಸಮಸ್ಯೆಯಿಂದ ಮುಕ್ತಿ

ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ  ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.

3.ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.

ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ  ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ  ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ  ಭಾವನೆಯಾಗಿತ್ತು.

4.ವಯಸ್ಸನ್ನು ಮರೆಮಾಚುತ್ತದೆ

ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ  ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

5.ಹೃದಯದ ಆರೋಗ್ಯ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ

ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ  ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.

6.ಮಾರಕ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ

ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.

7. ಥೈರಾಯ್ಡ್ ಉಪಶಮನದಲ್ಲಿ ಪರಿಣಾಮಕಾರಿ

ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು  ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

8.ಚರ್ಮರೋಗ ಸಮಸ್ಯೆಯಲ್ಲೂ ಪರಿಣಾಮಕಾರಿ

ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.

9.ರಕ್ತ ಹೀನತೆ ಸಮಸ್ಯೆ ದೂರ

ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ  ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ.  ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ವಿಶೇಷ ಲೇಖನ

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…