News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಜೀವನಶೈಲಿ

ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

445

ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳ ಬಗ್ಗೆ :-

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.

ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ  ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.

ಸ್ಟೆರಾಯ್ಡ್ ಆಧಾರಿತ ಕಾಸ್ಮೆಟಿಕ್ಸ್ ಬಳಸಿದ ಪರಿಣಾಮಗಳು :-

ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.

ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.

ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ  ಎನ್ನುತ್ತಾರೆ ಚರ್ಮರೋಗ ತಜ್ಞರು.

ಚರ್ಮರೋಗ ತಜ್ಞರ ಅಭಿಪ್ರಾಯ :- 

ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು.  ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು. 

ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…