ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

2342

ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..


ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672

ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’


ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672

ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.

ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.

ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.

ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.

ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..

ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವತಿ ಪ್ರೀತಿಸಿದ್ದಕ್ಕೆ ಕರೆಂಟ್​ ಶಾಕ್​ ನೀಡಿ ಯುವಕನ ಮರ್ಮಾಂಗ, ಕಿಡ್ನಿಗೆ ಹಾನಿ: ಕಾಂಗ್ರೆಸ್​ ಮುಖಂಡ ಕೈವಾಡ ಆರೋಪ…!

    ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್​ ಶಾಕ್​ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್​ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್‌ ಶಾಕ್…

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…