ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.

ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು. ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು
1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).
1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.