ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.
ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.
ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.
ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.
ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.
ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.
ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.
ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…