ಜ್ಯೋತಿಷ್ಯ

ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

326

ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.

ವೃಷಭ:-

ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.  ಮಿತ್ರರೊಡನೆ ವಿರಸವಾದೀತು. ವೃತ್ತಿರಂಗದಲ್ಲಿ ಮುನ್ನಡೆ ಇರುತ್ತದೆ. ತಪ್ಪು ಹೆಜ್ಜೆಯಿಂದ ಕಾರ್ಯವಿಳಂಬವಾದೀತು.

 

ಮಿಥುನ:

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು. ಕುಟುಂಬದ ಸದಸ್ಯರ ಬಗ್ಗೆ ಜಾಗ್ರತೆ ಇರಲಿ. ವಧುವರರಿಗೆ ಕಂಕಣಭಾಗ್ಯವೊದಗೀತು. ಆಗಾಗ ದೇಹಾರೋಗ್ಯದಲ್ಲಿ ಏರುಪೇರಾಗುತ್ತದೆ. ಕೋರ್ಟು ಕಚೇರಿ ಭಾಗದಲ್ಲಿ ಹೆಚ್ಚಿನ ಧನವ್ಯಯವಾದೀತು.

 

ಕಟಕ :-

ಅಸಹನೆ-ದುರಾಸೆಗೆ ಕಾರಣರಾಗದಿರಿ. ಸಂತಾನ ಸಂಬಂಧ ದುಃಖವಾದೀತು. ಕಚೇರಿಯಲ್ಲಿ ಅಧಿಕಾರಿ ವರ್ಗದವರು ಧರ್ಮಬಾಹಿರ ಕಾರ್ಯವನ್ನು ಮಾಡಲಿದ್ದಾರೆ. ಜಾಗ್ರತೆ ವಹಿಸಿರಿ. ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

 

 

 ಸಿಂಹ:

ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಹೊಸ ಚಿಂತನೆಗೆ ಸಾಧ್ಯತೆ ಇರುತ್ತದೆ. ಆದರೂ ದುಡುಕದೆ ಮುಂದುವರಿಯಬೇಕು. ಕಾರ್ಯಭಾರದಿಂದ ದೇಹಾಯಾಸಕ್ಕೆ ಕಾರಣರಾಗದಂತೆ ಜಾಗ್ರತೆ ವಹಿಸಬೇಕು. ಶುಭಕಾರ್ಯಗಳಿಗೆ ಓಡಾಟ ಒದಗಿ ಬರಲಿದೆ.

 

ಕನ್ಯಾ :-

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು. ಬಲವನ್ನು ಮುಂದುವರಿಸಬೇಕು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರಯತ್ನ

 

ತುಲಾ:

ಶ್ರೀದೇವತಾ ದರ್ಶನ ಭಾಗ್ಯದಿಂದ ಶಾಂತಿ ಸಮಾಧಾನ ಸಿಗಲಿದೆ. ಆಗಾಗ ಮಾನಸಿಕ ಅಸ್ಥಿರತೆ ಕಾಡಬಹದು. ಸಮಾಧಾನ ಚಿತ್ತರಾಗಿ ಮುಂದುವರಿಯಬೇಕಾಗು ತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.

 

ವೃಶ್ಚಿಕ :-

ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಬಲದಿಂದ ಮುಂದುವರಿಸಿದಲ್ಲಿ ಕಾರ್ಯಸಾಧ‌ನೆ. ಕಂಟ್ರಾಕ್ಟ್ ವೃತ್ತಿಯವರಿಗೆ ಲಾಭ ತಂದೀತು. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ಕೆಲಸಕಾರ್ಯಗಳನ್ನು ಪ್ರಯತ್ನ

 

 

ಧನಸ್ಸು:

ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ದೇವತಾರಾಧನೆಯ ಚಿಂತನೆ ನಡೆಯಲಿದೆ. ನಿಂತು ಹೋದ ಕೆಲಸಕಾರ್ಯಗಳು ಪುನಃ ಚಾಲನೆಗೆ ಬರಲಿವೆ. ಧನಾಗಮನದಲ್ಲಿ ಅಭಿವೃದ್ಧಿ ತೋರಿ ಬಂದು ಕಾರ್ಯಸಾಧನೆಗೆ ಅನುಕೂಲ. ಮುಂದುವರಿಯಿರಿ.

 

ಮಕರ :-

ಆದಾಯ ವೃದ್ಧಿಯಾದರೂ ಜಾಗ್ರತೆಯಿಂದ ಖರ್ಚು ಮಾಡಬೇಕು. ವಾಸ ಸ್ಥಳದ ಬದಲಾವಣೆ ಇರುತ್ತದೆ. ಆದರೂ ವಿಘ್ನಗಳು ತೊಂದರೆಗಳು ಬರುತ್ತಾ ಇರುತ್ತವೆ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

 

ಕುಂಭ:-

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ಔದ್ಯೋಗಿಕ ಆರ್ಥಿಕ ಅಭಿವೃದ್ಧಿ ಇರುತ್ತದೆ. ಧನವ್ಯಯವಾದರೂ ಆಗಾಗ ಧನಾಗಮನ ಇರುತ್ತದೆ. ಶುಭಮಂಗಲ ಕಾರ್ಯಗಳ ಪ್ರಸ್ತಾವಗಳು ನಡೆಯಲಿವೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.

 

ಮೀನ:-

ವೃತ್ತಿರಂಗದಲ್ಲಿ ಏರುಪೇರು ತೋರಿ ಬಂದರೂ ಛಲದಿಂದ ಮುಂದುವರಿಯಬೇಕು. ಸಾಂಸಾರಿಕವಾಗಿ ಮನದನ್ನೆಯ ಸಹಕಾರ ಇರುತ್ತದೆ. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಅಚ್ಚರಿಯ ವಾರ್ತೆ. ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಮತ್ತು ಕೇಂದ್ರಸರ್ಕಾರದಿಂದ ಉಚಿತ ಗ್ಯಾಸ್ ಯೋಜನೆಗಳು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…