ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

967

ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

 

ವೃಷಭ:-

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

 

ಮಿಥುನ:

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

 

ಕಟಕ :-

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

 

 ಸಿಂಹ:

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

 

ಕನ್ಯಾ :-

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

 

ತುಲಾ:

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

 

ವೃಶ್ಚಿಕ :-

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

 

ಧನಸ್ಸು:

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ‌, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

 

ಮಕರ :-

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

 

ಕುಂಭ:-

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ಮೀನ:-

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೇವಲ ಕೆಲವೇ ದಿನಗಳಲ್ಲಿ ನಿಮ್ಮ ದೇಹದ ತೂಕ ಕಡಿಮೆಯಾಗುತ್ತೆ ಈ ಒಂದು ಚಮಚ ಜೀರಿಗೆಯಿಂದ..!ಹೇಗೆಂದು ತಿಳಿಯಲು ಈ ಮಾಹಿತಿ ನೋಡಿ…

    ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…