inspirational

ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

21

ಮಯೂನ್ ಎನ್
ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.
ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ ಉಸಿರನ್ನು ಎಳೆದುಕೊಳ್ಳಿ. ನಿಮ್ಮ ಎದೆ ಹೊಟ್ಟೆಗಿಂತಾ ಹೆಚ್ಚು ಉಬ್ಬಿದ್ದರೆ. ನೀವು ತಪ್ಪುತಪ್ಪಾಗಿ ಉಸಿರಾಡುತಿದ್ದೀರಾ ಎಂದು ತಿಳಿಯಿರಿ. ಬದಲಿಗೆ ಹೊಟ್ಟೆಯೇ ಎದೆಗಿಂತಾ ಹೆಚ್ಚು ಉಬ್ಬಿದ್ದರೆ ನೀವು ಸರಿಯಾಗಿ ಉಸಿರಾಡುತಿದ್ದೀರಿ ಎಂದು ತಿಳಿಯಿರಿ.


ನಿಧಾನವಾಗಿ ಮತ್ತು ಆಳವಾಗಿ ಹೊಟ್ಟೆ ಉಬ್ಬಿ ಇಳಿಯುವಂತೆ ನಡೆಸುವ ಶ್ವಾಸೋಚ್ಛಾ ಸದಿಂದ ಅದ್ಭುತ ಲಾಭಗಳಿವೆ ಎಂದು ನಮ್ಮ ಪೂರ್ವಜರು ಹೇಳಿದ್ದಾರೆ. ಇದರ ಸತ್ಯಾಸತ್ಯತೆಯನ್ನು ವೈಜ್ಞಾನಿಕವಾಗಿ ಪರೀಕ್ಷಿಸಿದ ಇಂದಿನ ವೈದ್ಯರೂ ಸಹ ದೀರ್ಘ ಶ್ವಾಸೋಚ್ಛಾ ಸವನ್ನು ಅನುಮೋಸಿದ್ದಾರೆ. ದೊಡ್ಡ ದೊಡ್ಡ ದೇಶದಲ್ಲಿನ ದೊಡ್ಡ ದೊಡ್ಡ ಆಸ್ಪತ್ರೆಂiಲ್ಲಿನ ವೈದ್ಯರು ಈಗ ತಮ್ಮ ಎಲ್ಲ ರೋಗಿಗಳಿಗೆ ದೀರ್ಘ ಶ್ವಾಸೋಚ್ಛಾ ಸದ ಮೂಲ ಪಾಠಗಳನ್ನು ಬೋಧಿಸಲು ಪ್ರಾರಂಭಿಸಿದ್ದಾರೆ. ನೆಗಡಿಯಿಂದ ಹಿಡಿದು ಕ್ಯಾನ್ಸರ್ ವರೆಗಿನ ಎಲ್ಲ ರೋಗಗಳ ಉಪಶಮನದಲ್ಲಿ ದೀರ್ಘಶ್ವಾಸೋಚ್ಛಾ ಸದಿಂದ ಪ್ರಯೋಜನಗಳಿವೆ ಇಂದು ವೈದ್ಯರು ಕಂಡುಕೊಂಡಿದ್ದಾರೆ. ಹೀಗಾಗಿ ಕೆಲ ವೈದ್ಯರಂತೂ ತಮ್ಮ ಪರಿಣಿತ ಚಿಕಿತ್ಸೆಯನ್ನು ಬದಿಗೊತ್ತಿ ರೋಗಿಗಳಿಗೆ ದೀರ್ಘಶ್ವಾಸೋಚ್ಛಾ ಸದ ಮಹತ್ತ್ವವನ್ನು ಒತ್ತಿ ಒತ್ತಿ ಹೇಳಲಾರಂಭಸಿದ್ದಾರೆ.
ನಿಜಕ್ಕೂ ನಾವೀಗ ಅವಸರ ಅವಸರವಾಗಿ ತಪ್ಪುತಪ್ಪಾಗಿ ಉಸಿರಾಡುತ್ತಿದ್ದೇವೆ . ನಮ್ಮಲ್ಲಿನ ಮಾನಸಿಕ ಒತ್ತಡ, ಆಂತಕ, ಉದ್ವೇಗ ಹಾಗೂ ಉಸಿರಾಟದ ಬಗ್ಗೆ ಗಮನಹರಿಸದಿರುವುದೇ ಇದಕ್ಕೆ ಕಾರಣವಾಗಿದೆ. ಉಸಿರಾಟ ಅನೈಶ್ಚಿಕವಾಗಿ ನಡೆಯುವ ಕ್ರಿಯೆಯಾದರೂ ಚಿತ್ತೈಕಾಗ್ರತೆ ಇಂದ ನಮ್ಮ ಉಸಿರಾಟವನ್ನು ಉತ್ಕರ್ಷಗೊಳಿಸಿಕೊಳ್ಳಬಹುದು.
ನಿಧಾನವಾಗಿ ಹೊಟ್ಟೆಹೆಚ್ಚು ಉಬ್ಬುವಂತೆ ಉಸಿರನ್ನು ಎಳೆದುಕೊಂಡಾಗ ವಾಯು ಶ್ವಾಸಕೋಶದ ತಳದಲ್ಲಿ ಹೆಚ್ಚಾಗಿ ಜಮಾಯಿಸುತ್ತದೆ. ಆಗ ದೇಹಕ್ಕೆ ಹೆಚ್ಚು ಆಮ್ಲಜನಕ ಸೇರಲು ಹಾಗೂ ದೇಹದಿಂದ ಇಂಗಾಲ ಮುಂತಾದ ಕಲ್ಮಷ ಸಂಪೂರ್ಣವಾಗಿ ಹೊರಹೋಗಲು ಹೆಚ್ಚು ಅವಕಾಶ ದೊರೆಯ್ತುತದೆ. ಉತ್ತಮ ವಾಯುವಿನಿಮಯದಿಂದ ದೇಹದ ಆರೋಗ್ಯ ಉತ್ತಮಗೊಳ್ಳುತ್ತದೆ. ಉಸಿರಾಟದ ಗತಿ ನಿಮಿಷಕ್ಕೆ ಏಳು ಅಥವಾ ಎಂಟಕ್ಕೆ ಇಳಿಯುತ್ತದೆ. ಈ ಎಲ್ಲ ವಿದ್ಯಮಾನಗಳಿಂದ ಆರೋಗ್ಯದೊಂದಿಗೆ ಆಯುಷ್ಯವೂ ಹೆಚ್ಚುತ್ತದೆ. ಈಗಾಗಲೇ ರುಜುವಾತು ಆಗಿರುವಂತೆ ದೀರ್ಘಶ್ವಾಸೋಚ್ಛಾ ಸದಿಂದ ರಕ್ತದೊತ್ತಡ ತಗ್ಗುತ್ತದೆ. ಹೃದಯ ಬಡಿತ ಕಡಿಮೆಯಾಗುತ್ತದೆ. ದೇಹದ ಮಾಂಸಖಂಡಗಳು ಸಡಿಲಗೊಂಡು ವಿಶ್ರಾಂತಿ ಪಡೆಯುತ್ತವೆ. ಮಾನಸಿಕ ಉದ್ವೇಗ ತಗ್ಗತ್ತದೆ. ಮನಸ್ಸು ಪ್ರಶಾಂತವಾಗುತ್ತದೆ. ಮಾನವನು ಪ್ರತಿ ನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾ ಸರಾಸರಿ ಅರವತ್ತು ವರ್ಷಮಾತ್ರ ಬದುಕುತಿದ್ದಾನೆ. ಅದೇ ಆಮೆಯನ್ನು ನೋಡಿ ಅದು ನಿಮಿಷಕ್ಕೆ ಕೇವಲ ಮೂರ್‍ನಾಲ್ಕು ಬಾರಿ ಉಸಿರಾಡುತ್ತಾ ಬಹುದೀರ್ಘಕಾಲ ಬದುಕುತ್ತದೆ. ಚಿಕ್ಕ ಮಗುವನ್ನು ನೋಡಿ, ಅದು ಮಲಗಿದ್ದಾಗ ದೀರ್ಘವಾಗಿ ಉಸಿರಾಡುತ್ತಾ ಹೊಟ್ಟೆಯನ್ನು ಬಲೂನಿನಂತೆ ಉಬ್ಬಿಸುತ್ತದೆ. ಹೀಗಾಗಿ ನಾವೆಲ್ಲಾ ಮಕ್ಕಳಂತೆ ಉಸಿರಾಡಬೇಕು ಎನ್ನುತ್ತಾರೆ ತಜ್ಞ ವೈದ್ಯರು ಉಸಿರಾಟಂದ ಉತ್ತಮ ಪ್ರಯೋಜನಗಳನ್ನು ಪಡೆಯಲು ನಾವು ದೀರ್ಘವಾಗಿ ಹೊಟ್ಟೆ ಉಬ್ಬುವಂತೆ ಉಸಿರಾಡುವ ಕಲೆಯನ್ನು ಕರಗತಮಾಡಿಕೊಳ್ಳಬೇಕು. ಆರಂಭದಲ್ಲಿ ನಾವು ಪ್ರತಿದಿನ ಹತ್ತಿಪ್ಪತ್ತು ನಿಮಿಷ ನಮ್ಮ ಗಮನವನ್ನು ಉಸಿರಾಟದ ಮೇಲೆ ಹರಿಸಿ, ಚಿತ್ತೈಕಾಗ್ರತೆ ಇಂದ ಉಸಿರಾಟದಲ್ಲಿ ಸಾಕಷ್ಟು ಸುಧಾರಣಿಗಳನ್ನು ತಂದುಕೊಳ್ಳಬಹುದು. ಬೆನ್ನಮೇಲೆ ಮಲಗಿ ಹೊಟ್ಟೆ ಮೇಲೆ ಪುಸ್ತಕ ಇರಿಸಿ ಈ ಅಭ್ಯಾಸ ಮಾಡಬಹುದು. ಇಲ್ಲವೆ, ಕುಳಿತುಕೊಂಡು ಒಂದು ಕೈಯನ್ನು ಹೊಟ್ಟೆ ಮೇಲೆ, ಮತ್ತೊಂದು ಕೈಯನ್ನು ಎದೆ ಮೇಲೇ ಇರಿಸಿ ಅಭ್ಯಸಿಸಬಹುದು. ಪ್ರಾರಂಭದಲ್ಲಿ ನಮಗೆ ಕಾಣುವಂತೆ ಒಂದು ಗಡಿಯಾರವನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಪ್ರ್ರಶಾಂತವಾದ, ಏಕಾಂತ ಸ್ಥಳವನ್ನು ಆಯ್ದುಕೊಳ್ಳಿ. ನಿಮ್ಮ ಕಣ್ಣಿಗೆ ಕಾಣುವಂತೆ ಸೆಕೆಂಡು ಮುಳ್ಳು ಇರುವ ಗಡಿಯಾರವನ್ನು ಇಟ್ಟುಕೊಳ್ಳಿ. ನಿಮ್ಮ ಉಡುಪು ಸಡಿಲವಾಗಿರಲಿ.
ಬೆನ್ನಮೇಲೆ ಮಲಗಿಕೊಳ್ಳಿ. ಹುಟ್ಟೆಮೇಲೆ ಹಗುರಾದ ಪುಸ್ತಕ ಇರಿಸಿ. ಚಿತ್ತೈಕಾಗ್ರತೆ ಇಂದ ನಿಧಾನವಾಗಿ ಆಳವಾದ ಉಸಿರನ್ನು ಎಳೆದುಕೊಳ್ಳಿ. ಹೊಟ್ಟೆ ಎದೆ ಉಸಿರಿನಿಂದ ತುಂಬಿದ ಅನಂತರ ಒಂದೆರಡು ಕ್ಷಣ ಉಸಿರನ್ನು ಹಾಗೇ ಹಿಡಿದುಕೊಳ್ಳಿ. ಅನಂತರ ನಿಧಾನ ನಿಧಾನವಾಗಿ ಉಸಿರನ್ನು ಹೊರಬಿಡಿ. ಉಸಿರಾಟದುದ್ದಕ್ಕೂ ಹೊಟ್ಟೆಯ ಮೇಲಿನ ಪಸ್ತಕ ಏರಿಳಿಯುವುದನ್ನು ಗಮನಿಸಿ.

ಆರಾಮವಾಗಿ ಕುಳಿತುಕೊಳ್ಳಿ. ಬಲಗೈಯನ್ನು ಹೊಟ್ಟೆಯ ಮೇಲಿಡಿ. ಎಡಗೈಯನ್ನು ಎದೆಯ ಮೇಲಿಡಿ. ಮೇಲಿನಂತೆ ನಿಧಾನವಾ ಆಳವಾಗಿ ಉಸಿರಾಡಿ. ಎಡಗೈ ನಿಶ್ಚಲವಾಗಿ, ಬಲಗೈ ಏರಿಳಿಯುತ್ತಿರುವುದನ್ನು ಗಮನಿಸಿ.
ಗಡಿಯಾರದಲ್ಲಿ ನಿಮ್ಮ ಶ್ವಾಸೋಚ್ಛಾ ಸದ ಗತಿಯನ್ನು ಲೆಕ್ಕ ಹಾಕಿ. ನಿಮ್ಮ ಉಸಿರಾಟ ನಿಮಿಷಕ್ಕೆ ಏಳು ಅಥವಾ ಎಂಟು ಬಾರಿ ಇರಬೇಕು.
ದೀರ್ಘಶ್ವಾಸೋಚ್ಛಾ ಸದ ಪ್ರಯೋಜನಗಳು:
ದೇಹಕ್ಕೆ ಅಧಿಕ ಆಮ್ಲಜನಕ ದೊರೆಯುತ್ತದೆ.
ದೇಹದ ಕಲ್ಮಶ (ಇಂಗಾಲ) ಸಂಪೂರ್ಣವಾಗಿ ವಿಸರ್ಜನೆಯಾಗುತ್ತದೆ.
ಹೃದಯದ ಮಿಡಿತ ಕಡಿಮೆಯಾಗುತ್ತದೆ. ಹೃದಯ ಗಟ್ಟಿಯಾಗುತ್ತದೆ.
ರಕ್ತದೊತ್ತಡ (ಬಿ. ಪಿ.) ಕಡಿಮೆಯಗುತ್ತದೆ.
ಮಾಂಸಖಂಡಗಳಿಗೆ ಸಡಿಲಗೊಂಡು ವಿರಮಿಸುವ ಅವಕಾಶ ಸಿಗುತ್ತದೆ.
ಮಾನಸಿಕ ಉದ್ವೇಗ, ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.
ಮನಸ್ಸು ಉಲ್ಲಾಸಗೊಳ್ಳುತ್ತದೆ, ಪ್ರಶಾಂತಗೊಳ್ಳುತ್ತದೆ.
ಆರೋಗ್ಯ ಉತ್ತಮವಾಗುತ್ತದೆ. ಆಯಷ್ಸು ಹೆಚ್ಚುತ್ತದೆ.

ವಿಳಾಸ: MAYOON N

DIRECTOR OF DRM CAREER BUILD CENTER

MANNAGER @ JEEVA SANJEEVANA NATURAL LIFE, KOLAR – 563101, ಕರ್ನಾಟಕ, ಭಾರತ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು