News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

49

ಮಯೂನ್ ಎನ್
ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.
ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ ಉಸಿರನ್ನು ಎಳೆದುಕೊಳ್ಳಿ. ನಿಮ್ಮ ಎದೆ ಹೊಟ್ಟೆಗಿಂತಾ ಹೆಚ್ಚು ಉಬ್ಬಿದ್ದರೆ. ನೀವು ತಪ್ಪುತಪ್ಪಾಗಿ ಉಸಿರಾಡುತಿದ್ದೀರಾ ಎಂದು ತಿಳಿಯಿರಿ. ಬದಲಿಗೆ ಹೊಟ್ಟೆಯೇ ಎದೆಗಿಂತಾ ಹೆಚ್ಚು ಉಬ್ಬಿದ್ದರೆ ನೀವು ಸರಿಯಾಗಿ ಉಸಿರಾಡುತಿದ್ದೀರಿ ಎಂದು ತಿಳಿಯಿರಿ.


ನಿಧಾನವಾಗಿ ಮತ್ತು ಆಳವಾಗಿ ಹೊಟ್ಟೆ ಉಬ್ಬಿ ಇಳಿಯುವಂತೆ ನಡೆಸುವ ಶ್ವಾಸೋಚ್ಛಾ ಸದಿಂದ ಅದ್ಭುತ ಲಾಭಗಳಿವೆ ಎಂದು ನಮ್ಮ ಪೂರ್ವಜರು ಹೇಳಿದ್ದಾರೆ. ಇದರ ಸತ್ಯಾಸತ್ಯತೆಯನ್ನು ವೈಜ್ಞಾನಿಕವಾಗಿ ಪರೀಕ್ಷಿಸಿದ ಇಂದಿನ ವೈದ್ಯರೂ ಸಹ ದೀರ್ಘ ಶ್ವಾಸೋಚ್ಛಾ ಸವನ್ನು ಅನುಮೋಸಿದ್ದಾರೆ. ದೊಡ್ಡ ದೊಡ್ಡ ದೇಶದಲ್ಲಿನ ದೊಡ್ಡ ದೊಡ್ಡ ಆಸ್ಪತ್ರೆಂiಲ್ಲಿನ ವೈದ್ಯರು ಈಗ ತಮ್ಮ ಎಲ್ಲ ರೋಗಿಗಳಿಗೆ ದೀರ್ಘ ಶ್ವಾಸೋಚ್ಛಾ ಸದ ಮೂಲ ಪಾಠಗಳನ್ನು ಬೋಧಿಸಲು ಪ್ರಾರಂಭಿಸಿದ್ದಾರೆ. ನೆಗಡಿಯಿಂದ ಹಿಡಿದು ಕ್ಯಾನ್ಸರ್ ವರೆಗಿನ ಎಲ್ಲ ರೋಗಗಳ ಉಪಶಮನದಲ್ಲಿ ದೀರ್ಘಶ್ವಾಸೋಚ್ಛಾ ಸದಿಂದ ಪ್ರಯೋಜನಗಳಿವೆ ಇಂದು ವೈದ್ಯರು ಕಂಡುಕೊಂಡಿದ್ದಾರೆ. ಹೀಗಾಗಿ ಕೆಲ ವೈದ್ಯರಂತೂ ತಮ್ಮ ಪರಿಣಿತ ಚಿಕಿತ್ಸೆಯನ್ನು ಬದಿಗೊತ್ತಿ ರೋಗಿಗಳಿಗೆ ದೀರ್ಘಶ್ವಾಸೋಚ್ಛಾ ಸದ ಮಹತ್ತ್ವವನ್ನು ಒತ್ತಿ ಒತ್ತಿ ಹೇಳಲಾರಂಭಸಿದ್ದಾರೆ.
ನಿಜಕ್ಕೂ ನಾವೀಗ ಅವಸರ ಅವಸರವಾಗಿ ತಪ್ಪುತಪ್ಪಾಗಿ ಉಸಿರಾಡುತ್ತಿದ್ದೇವೆ . ನಮ್ಮಲ್ಲಿನ ಮಾನಸಿಕ ಒತ್ತಡ, ಆಂತಕ, ಉದ್ವೇಗ ಹಾಗೂ ಉಸಿರಾಟದ ಬಗ್ಗೆ ಗಮನಹರಿಸದಿರುವುದೇ ಇದಕ್ಕೆ ಕಾರಣವಾಗಿದೆ. ಉಸಿರಾಟ ಅನೈಶ್ಚಿಕವಾಗಿ ನಡೆಯುವ ಕ್ರಿಯೆಯಾದರೂ ಚಿತ್ತೈಕಾಗ್ರತೆ ಇಂದ ನಮ್ಮ ಉಸಿರಾಟವನ್ನು ಉತ್ಕರ್ಷಗೊಳಿಸಿಕೊಳ್ಳಬಹುದು.
ನಿಧಾನವಾಗಿ ಹೊಟ್ಟೆಹೆಚ್ಚು ಉಬ್ಬುವಂತೆ ಉಸಿರನ್ನು ಎಳೆದುಕೊಂಡಾಗ ವಾಯು ಶ್ವಾಸಕೋಶದ ತಳದಲ್ಲಿ ಹೆಚ್ಚಾಗಿ ಜಮಾಯಿಸುತ್ತದೆ. ಆಗ ದೇಹಕ್ಕೆ ಹೆಚ್ಚು ಆಮ್ಲಜನಕ ಸೇರಲು ಹಾಗೂ ದೇಹದಿಂದ ಇಂಗಾಲ ಮುಂತಾದ ಕಲ್ಮಷ ಸಂಪೂರ್ಣವಾಗಿ ಹೊರಹೋಗಲು ಹೆಚ್ಚು ಅವಕಾಶ ದೊರೆಯ್ತುತದೆ. ಉತ್ತಮ ವಾಯುವಿನಿಮಯದಿಂದ ದೇಹದ ಆರೋಗ್ಯ ಉತ್ತಮಗೊಳ್ಳುತ್ತದೆ. ಉಸಿರಾಟದ ಗತಿ ನಿಮಿಷಕ್ಕೆ ಏಳು ಅಥವಾ ಎಂಟಕ್ಕೆ ಇಳಿಯುತ್ತದೆ. ಈ ಎಲ್ಲ ವಿದ್ಯಮಾನಗಳಿಂದ ಆರೋಗ್ಯದೊಂದಿಗೆ ಆಯುಷ್ಯವೂ ಹೆಚ್ಚುತ್ತದೆ. ಈಗಾಗಲೇ ರುಜುವಾತು ಆಗಿರುವಂತೆ ದೀರ್ಘಶ್ವಾಸೋಚ್ಛಾ ಸದಿಂದ ರಕ್ತದೊತ್ತಡ ತಗ್ಗುತ್ತದೆ. ಹೃದಯ ಬಡಿತ ಕಡಿಮೆಯಾಗುತ್ತದೆ. ದೇಹದ ಮಾಂಸಖಂಡಗಳು ಸಡಿಲಗೊಂಡು ವಿಶ್ರಾಂತಿ ಪಡೆಯುತ್ತವೆ. ಮಾನಸಿಕ ಉದ್ವೇಗ ತಗ್ಗತ್ತದೆ. ಮನಸ್ಸು ಪ್ರಶಾಂತವಾಗುತ್ತದೆ. ಮಾನವನು ಪ್ರತಿ ನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾ ಸರಾಸರಿ ಅರವತ್ತು ವರ್ಷಮಾತ್ರ ಬದುಕುತಿದ್ದಾನೆ. ಅದೇ ಆಮೆಯನ್ನು ನೋಡಿ ಅದು ನಿಮಿಷಕ್ಕೆ ಕೇವಲ ಮೂರ್‍ನಾಲ್ಕು ಬಾರಿ ಉಸಿರಾಡುತ್ತಾ ಬಹುದೀರ್ಘಕಾಲ ಬದುಕುತ್ತದೆ. ಚಿಕ್ಕ ಮಗುವನ್ನು ನೋಡಿ, ಅದು ಮಲಗಿದ್ದಾಗ ದೀರ್ಘವಾಗಿ ಉಸಿರಾಡುತ್ತಾ ಹೊಟ್ಟೆಯನ್ನು ಬಲೂನಿನಂತೆ ಉಬ್ಬಿಸುತ್ತದೆ. ಹೀಗಾಗಿ ನಾವೆಲ್ಲಾ ಮಕ್ಕಳಂತೆ ಉಸಿರಾಡಬೇಕು ಎನ್ನುತ್ತಾರೆ ತಜ್ಞ ವೈದ್ಯರು ಉಸಿರಾಟಂದ ಉತ್ತಮ ಪ್ರಯೋಜನಗಳನ್ನು ಪಡೆಯಲು ನಾವು ದೀರ್ಘವಾಗಿ ಹೊಟ್ಟೆ ಉಬ್ಬುವಂತೆ ಉಸಿರಾಡುವ ಕಲೆಯನ್ನು ಕರಗತಮಾಡಿಕೊಳ್ಳಬೇಕು. ಆರಂಭದಲ್ಲಿ ನಾವು ಪ್ರತಿದಿನ ಹತ್ತಿಪ್ಪತ್ತು ನಿಮಿಷ ನಮ್ಮ ಗಮನವನ್ನು ಉಸಿರಾಟದ ಮೇಲೆ ಹರಿಸಿ, ಚಿತ್ತೈಕಾಗ್ರತೆ ಇಂದ ಉಸಿರಾಟದಲ್ಲಿ ಸಾಕಷ್ಟು ಸುಧಾರಣಿಗಳನ್ನು ತಂದುಕೊಳ್ಳಬಹುದು. ಬೆನ್ನಮೇಲೆ ಮಲಗಿ ಹೊಟ್ಟೆ ಮೇಲೆ ಪುಸ್ತಕ ಇರಿಸಿ ಈ ಅಭ್ಯಾಸ ಮಾಡಬಹುದು. ಇಲ್ಲವೆ, ಕುಳಿತುಕೊಂಡು ಒಂದು ಕೈಯನ್ನು ಹೊಟ್ಟೆ ಮೇಲೆ, ಮತ್ತೊಂದು ಕೈಯನ್ನು ಎದೆ ಮೇಲೇ ಇರಿಸಿ ಅಭ್ಯಸಿಸಬಹುದು. ಪ್ರಾರಂಭದಲ್ಲಿ ನಮಗೆ ಕಾಣುವಂತೆ ಒಂದು ಗಡಿಯಾರವನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಪ್ರ್ರಶಾಂತವಾದ, ಏಕಾಂತ ಸ್ಥಳವನ್ನು ಆಯ್ದುಕೊಳ್ಳಿ. ನಿಮ್ಮ ಕಣ್ಣಿಗೆ ಕಾಣುವಂತೆ ಸೆಕೆಂಡು ಮುಳ್ಳು ಇರುವ ಗಡಿಯಾರವನ್ನು ಇಟ್ಟುಕೊಳ್ಳಿ. ನಿಮ್ಮ ಉಡುಪು ಸಡಿಲವಾಗಿರಲಿ.
ಬೆನ್ನಮೇಲೆ ಮಲಗಿಕೊಳ್ಳಿ. ಹುಟ್ಟೆಮೇಲೆ ಹಗುರಾದ ಪುಸ್ತಕ ಇರಿಸಿ. ಚಿತ್ತೈಕಾಗ್ರತೆ ಇಂದ ನಿಧಾನವಾಗಿ ಆಳವಾದ ಉಸಿರನ್ನು ಎಳೆದುಕೊಳ್ಳಿ. ಹೊಟ್ಟೆ ಎದೆ ಉಸಿರಿನಿಂದ ತುಂಬಿದ ಅನಂತರ ಒಂದೆರಡು ಕ್ಷಣ ಉಸಿರನ್ನು ಹಾಗೇ ಹಿಡಿದುಕೊಳ್ಳಿ. ಅನಂತರ ನಿಧಾನ ನಿಧಾನವಾಗಿ ಉಸಿರನ್ನು ಹೊರಬಿಡಿ. ಉಸಿರಾಟದುದ್ದಕ್ಕೂ ಹೊಟ್ಟೆಯ ಮೇಲಿನ ಪಸ್ತಕ ಏರಿಳಿಯುವುದನ್ನು ಗಮನಿಸಿ.

ಆರಾಮವಾಗಿ ಕುಳಿತುಕೊಳ್ಳಿ. ಬಲಗೈಯನ್ನು ಹೊಟ್ಟೆಯ ಮೇಲಿಡಿ. ಎಡಗೈಯನ್ನು ಎದೆಯ ಮೇಲಿಡಿ. ಮೇಲಿನಂತೆ ನಿಧಾನವಾ ಆಳವಾಗಿ ಉಸಿರಾಡಿ. ಎಡಗೈ ನಿಶ್ಚಲವಾಗಿ, ಬಲಗೈ ಏರಿಳಿಯುತ್ತಿರುವುದನ್ನು ಗಮನಿಸಿ.
ಗಡಿಯಾರದಲ್ಲಿ ನಿಮ್ಮ ಶ್ವಾಸೋಚ್ಛಾ ಸದ ಗತಿಯನ್ನು ಲೆಕ್ಕ ಹಾಕಿ. ನಿಮ್ಮ ಉಸಿರಾಟ ನಿಮಿಷಕ್ಕೆ ಏಳು ಅಥವಾ ಎಂಟು ಬಾರಿ ಇರಬೇಕು.
ದೀರ್ಘಶ್ವಾಸೋಚ್ಛಾ ಸದ ಪ್ರಯೋಜನಗಳು:
ದೇಹಕ್ಕೆ ಅಧಿಕ ಆಮ್ಲಜನಕ ದೊರೆಯುತ್ತದೆ.
ದೇಹದ ಕಲ್ಮಶ (ಇಂಗಾಲ) ಸಂಪೂರ್ಣವಾಗಿ ವಿಸರ್ಜನೆಯಾಗುತ್ತದೆ.
ಹೃದಯದ ಮಿಡಿತ ಕಡಿಮೆಯಾಗುತ್ತದೆ. ಹೃದಯ ಗಟ್ಟಿಯಾಗುತ್ತದೆ.
ರಕ್ತದೊತ್ತಡ (ಬಿ. ಪಿ.) ಕಡಿಮೆಯಗುತ್ತದೆ.
ಮಾಂಸಖಂಡಗಳಿಗೆ ಸಡಿಲಗೊಂಡು ವಿರಮಿಸುವ ಅವಕಾಶ ಸಿಗುತ್ತದೆ.
ಮಾನಸಿಕ ಉದ್ವೇಗ, ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.
ಮನಸ್ಸು ಉಲ್ಲಾಸಗೊಳ್ಳುತ್ತದೆ, ಪ್ರಶಾಂತಗೊಳ್ಳುತ್ತದೆ.
ಆರೋಗ್ಯ ಉತ್ತಮವಾಗುತ್ತದೆ. ಆಯಷ್ಸು ಹೆಚ್ಚುತ್ತದೆ.

ವಿಳಾಸ: MAYOON N

DIRECTOR OF DRM CAREER BUILD CENTER

MANNAGER @ JEEVA SANJEEVANA NATURAL LIFE, KOLAR – 563101, ಕರ್ನಾಟಕ, ಭಾರತ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…