ಕಾನೂನು

ದೇವಮಾನವನಿಗೆ ಇನ್ನು ಮುಂದೆ ಜೈಲು ವಾಸ!ಹಿಂಸಾಚಾರದಲ್ಲಿ ಸತ್ತ ಜನ ಎಷ್ಟು ಗೊತ್ತಾ?

665

ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪುವು ಪ್ರಕಟಿಸಿದೆ. 7 ವರ್ಷ ಜೈಲುಶಿಕ್ಷೆ ವಿಧಿಸಿದೆ. ಬಾಬಾ ಇನ್ನು ತನ್ನ ಆಶ್ರಮ ಬಿಟ್ಟು ಜೈಲಿನಲ್ಲಿ ಕಂಬಿ ಎಣಿಸಬೇಕಿದೆ. ಬಾಬಾ ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಜೈಲಿಗೆ ರವಾನೆ ಮಾಡಲಾಗುತ್ತಿದೆ.

ಹರಿಯಾಣದ ಸಿರ್ಸಾದಲ್ಲಿರುವ ಆಶ್ರಮದಲ್ಲಿ ರಾಮ್ ರಹೀಂ ವಿರುದ್ಧ 1999ರಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಸಾಭಿತಾಗಿದೆ. ಕಳೆದ 2002ರಿಂದ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇಂದು ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.

ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶರು, ರಾಮ್ ರಹೀಂ ಸಿಂಗ್ ನನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದರು, ಈ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ರನ್ನು ಪೊಲೀಸರು ಅಂಬಾಲಾ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದ ಬೆನ್ನಲ್ಲೇ ಹರಿಯಾಣದ ಪಂಚಕುಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಆರೋಪ ಸಾಬೀತಾಗುತ್ತಿದ್ದಂತೆಯೇ ಕೋರ್ಟ್ ಎದುರೇ ನೆರೆದಿದ್ದ ಬಾಬಾ ಭಕ್ತರು ರಾಷ್ಟ್ರೀಯ ಸುದ್ದಿವಾಹಿನಿಯ ಮೂರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯಿಟ್ಟಿದ್ದಾರೆ.

ಘಟನೆಯಿಂದಾಗಿ 11 ಮಂದಿ ಬಾಬಾ ಭಕ್ತರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹರಿಯಾಣದ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ್, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಬಾಬಾ ಭಕ್ತರು ಹಿಂಸಾಚಾರಕ್ಕೆ ತಿರುಗಿದ್ದಾರೆ. ಪೊಲೀಸರ ಮೇಲೆಯೇ ರಾಮ್ ರಹೀಂ ಭಕ್ತರಿಂದ ಕಲ್ಲು ತೂರಾಟ, ಹಲ್ಲೆ ನಡೆಯುತ್ತಿದೆ. ತಮ್ಮ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು, ಜಲಫಿರಂಗಿ ಬಳಸಿದ್ರೂ ಬಗ್ಗದೇ ಭದ್ರತಾ ಪಡೆ ಮೇಲೂ ಕಲ್ಲು ತೂರಾಟ ನಡೆಸುತ್ತಿದ್ದಾರೆ.

ಸರ್ಕಾರಿ ಕಚೇರಿ, ಪೆಟ್ರೋಲ್ ಬಂಕ್, ವಿದ್ಯುತ್ ಸ್ಥಾವರಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಮನೆಯೊಳಗೆ ನಿಲ್ಲಿಸಿದ್ದ ಕಾರ್ ಗಳ ಮೇಲೂ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯ ಹರಿಯಾಣದ ಪರಿಸ್ಥಿತಿ ಬಿಗಡಾಯಿಸಿದೆ. ಇತ್ತ ನವದೆಹಲಿಯಲ್ಲಿ 7 ಕಡೆ ಕಲ್ಲು ತೂರಾಟ, ಬೆಂಕಿ ಹಚ್ಚಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…