ಕಾನೂನು

ದೇವಮಾನವನಿಗೆ ಇನ್ನು ಮುಂದೆ ಜೈಲು ವಾಸ!ಹಿಂಸಾಚಾರದಲ್ಲಿ ಸತ್ತ ಜನ ಎಷ್ಟು ಗೊತ್ತಾ?

675

ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪುವು ಪ್ರಕಟಿಸಿದೆ. 7 ವರ್ಷ ಜೈಲುಶಿಕ್ಷೆ ವಿಧಿಸಿದೆ. ಬಾಬಾ ಇನ್ನು ತನ್ನ ಆಶ್ರಮ ಬಿಟ್ಟು ಜೈಲಿನಲ್ಲಿ ಕಂಬಿ ಎಣಿಸಬೇಕಿದೆ. ಬಾಬಾ ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಜೈಲಿಗೆ ರವಾನೆ ಮಾಡಲಾಗುತ್ತಿದೆ.

ಹರಿಯಾಣದ ಸಿರ್ಸಾದಲ್ಲಿರುವ ಆಶ್ರಮದಲ್ಲಿ ರಾಮ್ ರಹೀಂ ವಿರುದ್ಧ 1999ರಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಸಾಭಿತಾಗಿದೆ. ಕಳೆದ 2002ರಿಂದ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇಂದು ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.

ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶರು, ರಾಮ್ ರಹೀಂ ಸಿಂಗ್ ನನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದರು, ಈ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ರನ್ನು ಪೊಲೀಸರು ಅಂಬಾಲಾ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದ ಬೆನ್ನಲ್ಲೇ ಹರಿಯಾಣದ ಪಂಚಕುಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಆರೋಪ ಸಾಬೀತಾಗುತ್ತಿದ್ದಂತೆಯೇ ಕೋರ್ಟ್ ಎದುರೇ ನೆರೆದಿದ್ದ ಬಾಬಾ ಭಕ್ತರು ರಾಷ್ಟ್ರೀಯ ಸುದ್ದಿವಾಹಿನಿಯ ಮೂರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯಿಟ್ಟಿದ್ದಾರೆ.

ಘಟನೆಯಿಂದಾಗಿ 11 ಮಂದಿ ಬಾಬಾ ಭಕ್ತರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹರಿಯಾಣದ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ್, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಬಾಬಾ ಭಕ್ತರು ಹಿಂಸಾಚಾರಕ್ಕೆ ತಿರುಗಿದ್ದಾರೆ. ಪೊಲೀಸರ ಮೇಲೆಯೇ ರಾಮ್ ರಹೀಂ ಭಕ್ತರಿಂದ ಕಲ್ಲು ತೂರಾಟ, ಹಲ್ಲೆ ನಡೆಯುತ್ತಿದೆ. ತಮ್ಮ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು, ಜಲಫಿರಂಗಿ ಬಳಸಿದ್ರೂ ಬಗ್ಗದೇ ಭದ್ರತಾ ಪಡೆ ಮೇಲೂ ಕಲ್ಲು ತೂರಾಟ ನಡೆಸುತ್ತಿದ್ದಾರೆ.

ಸರ್ಕಾರಿ ಕಚೇರಿ, ಪೆಟ್ರೋಲ್ ಬಂಕ್, ವಿದ್ಯುತ್ ಸ್ಥಾವರಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಮನೆಯೊಳಗೆ ನಿಲ್ಲಿಸಿದ್ದ ಕಾರ್ ಗಳ ಮೇಲೂ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯ ಹರಿಯಾಣದ ಪರಿಸ್ಥಿತಿ ಬಿಗಡಾಯಿಸಿದೆ. ಇತ್ತ ನವದೆಹಲಿಯಲ್ಲಿ 7 ಕಡೆ ಕಲ್ಲು ತೂರಾಟ, ಬೆಂಕಿ ಹಚ್ಚಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…