ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪುವು ಪ್ರಕಟಿಸಿದೆ. 7 ವರ್ಷ ಜೈಲುಶಿಕ್ಷೆ ವಿಧಿಸಿದೆ. ಬಾಬಾ ಇನ್ನು ತನ್ನ ಆಶ್ರಮ ಬಿಟ್ಟು ಜೈಲಿನಲ್ಲಿ ಕಂಬಿ ಎಣಿಸಬೇಕಿದೆ. ಬಾಬಾ ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಜೈಲಿಗೆ ರವಾನೆ ಮಾಡಲಾಗುತ್ತಿದೆ.
ಹರಿಯಾಣದ ಸಿರ್ಸಾದಲ್ಲಿರುವ ಆಶ್ರಮದಲ್ಲಿ ರಾಮ್ ರಹೀಂ ವಿರುದ್ಧ 1999ರಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಸಾಭಿತಾಗಿದೆ. ಕಳೆದ 2002ರಿಂದ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇಂದು ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.
ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶರು, ರಾಮ್ ರಹೀಂ ಸಿಂಗ್ ನನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದರು, ಈ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ರನ್ನು ಪೊಲೀಸರು ಅಂಬಾಲಾ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದ ಬೆನ್ನಲ್ಲೇ ಹರಿಯಾಣದ ಪಂಚಕುಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಆರೋಪ ಸಾಬೀತಾಗುತ್ತಿದ್ದಂತೆಯೇ ಕೋರ್ಟ್ ಎದುರೇ ನೆರೆದಿದ್ದ ಬಾಬಾ ಭಕ್ತರು ರಾಷ್ಟ್ರೀಯ ಸುದ್ದಿವಾಹಿನಿಯ ಮೂರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯಿಟ್ಟಿದ್ದಾರೆ.
ಘಟನೆಯಿಂದಾಗಿ 11 ಮಂದಿ ಬಾಬಾ ಭಕ್ತರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹರಿಯಾಣದ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ್, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಬಾಬಾ ಭಕ್ತರು ಹಿಂಸಾಚಾರಕ್ಕೆ ತಿರುಗಿದ್ದಾರೆ. ಪೊಲೀಸರ ಮೇಲೆಯೇ ರಾಮ್ ರಹೀಂ ಭಕ್ತರಿಂದ ಕಲ್ಲು ತೂರಾಟ, ಹಲ್ಲೆ ನಡೆಯುತ್ತಿದೆ. ತಮ್ಮ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು, ಜಲಫಿರಂಗಿ ಬಳಸಿದ್ರೂ ಬಗ್ಗದೇ ಭದ್ರತಾ ಪಡೆ ಮೇಲೂ ಕಲ್ಲು ತೂರಾಟ ನಡೆಸುತ್ತಿದ್ದಾರೆ.
ಸರ್ಕಾರಿ ಕಚೇರಿ, ಪೆಟ್ರೋಲ್ ಬಂಕ್, ವಿದ್ಯುತ್ ಸ್ಥಾವರಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಮನೆಯೊಳಗೆ ನಿಲ್ಲಿಸಿದ್ದ ಕಾರ್ ಗಳ ಮೇಲೂ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯ ಹರಿಯಾಣದ ಪರಿಸ್ಥಿತಿ ಬಿಗಡಾಯಿಸಿದೆ. ಇತ್ತ ನವದೆಹಲಿಯಲ್ಲಿ 7 ಕಡೆ ಕಲ್ಲು ತೂರಾಟ, ಬೆಂಕಿ ಹಚ್ಚಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…