ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…