ವಿಸ್ಮಯ ಜಗತ್ತು

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

339

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.

ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.

ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ದೇವರು-ಧರ್ಮ

    ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

    ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…