ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.
ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.
ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…