News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

364

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.

ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.

ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಸುದ್ದಿ

    ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪಗೆ ಪೆನ್‍ ಡ್ರೈವ್‍ ಶಾಕ್!ಅಸಲಿಗೆ ಪೆನ್‍ ಡ್ರೈವ್‍ ನಲ್ಲಿ ಏನಿದೆ ಗೊತ್ತಾ?

    ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್‍.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್‍ ಡ್ರೈವ್‍ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್‍ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್‍, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

  • ಗ್ಯಾಜೆಟ್

    ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

    ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.