ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.