ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಆರ್ಚರಿ ವಿಶ್ವಕಪ್ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…